ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ನ್ಯಾಷನಲ್‌ ಹೆರಾಲ್ಡ್‌ಗೆ ಡಿ.ಕೆ. ಶಿವಕುಮಾರ್ ₹ 25 ಲಕ್ಷ ದೇಣಿಗೆ: ಇ.ಡಿ

Published : 23 ಮೇ 2025, 16:14 IST
Last Updated : 23 ಮೇ 2025, 20:28 IST
ಫಾಲೋ ಮಾಡಿ
Comments
ಕದ್ದುಮುಚ್ಚಿ ಹಣ ನೀಡಿಲ್ಲ: ಶಿವಕುಮಾರ್
ವಿಜಯಪುರ: ‘ನ್ಯಾಷನಲ್ ಹೆರಾಲ್ಡ್ ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌. ಅದಕ್ಕೆ ನಾನು ಹಾಗೂ ಸುರೇಶ್ ತಲಾ ₹25 ಲಕ್ಷ ದುಡ್ಡು ಕೊಟ್ಟಿದ್ದೇವೆ. ‌ನಮ್ಮ ಟ್ರಸ್ಟ್‌ನಿಂದಲೂ ದೇಣಿಗೆ ನೀಡಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೊಲ್ಹಾರದಲ್ಲಿ ಶುಕ್ರವಾರ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಹೋದರ ಡಿ.ಕೆ.ಸುರೇಶ, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮತ್ತು ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಸುದ್ದಿಗಾರರಿಗೆ ಉತ್ತರಿಸಿದ ಅವರು, ‘ನಾವು ದುಡಿದ ಆಸ್ತಿಯಿಂದ ರಾಜಾರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ನೀಡಿಲ್ಲ’ ಎಂದು ಹೇಳಿದರು.
ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪೇ??
– ಸಿದ್ದರಾಮಯ್ಯ, ಮುಖ್ಯಮಂತ್ರಿ
ರೇವಂತ ರೆಡ್ಡಿ ಹೆಸರೂ ಉಲ್ಲೇಖ?
ಹೈದರಾಬಾದ್: ಇ.ಡಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರ ಹೆಸರಿದೆ ಎಂದು ವರದಿಯಾಗಿದೆ. ರೇವಂತ ರೆಡ್ಡಿ ಅವರು ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿದ್ದಾಗ ‘ಯಂಗ್ ಇಂಡಿಯನ್‌’ ಸಂಸ್ಥೆಗೆ ಹಣ ಕ್ರೋಡೀಕರಿಸಲು ಒತ್ತು ನೀಡಿದ್ದರು ಎಂದು ಉಲ್ಲೇಖಿಸಲಾಗಿದೆ ಎನ್ನಲಾ ಗಿದೆ. ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು, ‘ರೇವಂತ ರೆಡ್ಡಿ ಅವರು ತೆಲಂಗಾಣವನ್ನು ಕಾಂಗ್ರೆಸ್‌ ಪಕ್ಷದ ಎ.ಟಿ.ಎಂ ಆಗಿ ಪರಿವರ್ತಿಸಿದ್ದಾರೆ’ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT