‘ದುಬೈನಿಂದ ಯುವಕ ಪ್ರಯಾಣಿಸಿದ್ದ ವಿಮಾನದಲ್ಲಿ ಒಟ್ಟು 191 ಪ್ರಯಾಣಿಕರಿದ್ದರು. ವಿಮಾನದಲ್ಲಿ ಯುವಕ ಕುಳಿತಿದ್ದ ಸಾಲು, ಅದರ ಎದುರು ಮತ್ತು ಹಿಂದಿನ ಮೂರು ಸಾಲುಗಳ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ್ದವರು ಸೇರಿ ಒಟ್ಟು 35 ಮಂದಿಗೆ ಪ್ರತ್ಯೇಕವಾಸಕ್ಕೆ ಒಳಗಾಗುವಂತೆ ಸೂಚಿಸಿದ್ದೇವೆ. ಇವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 15, ಉಡುಪಿ ಜಿಲ್ಲೆಯ 6, ಕಾಸರಗೋಡು ಜಿಲ್ಲೆಯ 13, ಕಣ್ಣೂರಿನ ಒಬ್ಬರು ಸೇರಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಯಾಣಿಕರು ರಾಜ್ಯದ ಆರೋಗ್ಯ ಇಲಾಖೆಯ ನಿರಂತರ ಸಂಪರ್ಕದಲ್ಲಿದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಯಾರಲ್ಲೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ’ ಎಂದು ಅವರು ಮಾಹಿತಿ ನೀಡಿದರು.