ತುಮಕೂರಿನಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಲಾರಿ ಮುಂಜಾನೆ 4 ಗಂಟೆಯ ಸುಮಾರಿಗೆ 3ನೇ ತಿರುವಿನ ಬಳಿ ಆ್ಯಕ್ಸೆಲ್ ತುಂಡಾಗಿ ರಸ್ತೆಗೆ ಅಡ್ಡಲಾಗಿ ನಿಂತಿದ್ದರಿಂದ ಎರಡೂ ಕಡೆ ವಾಹನ ಸಂಚರಿಸಲಾಗದೆ ಬೆಳಿಗ್ಗೆ 8 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಹಿಟಾಚಿ ಯಂತ್ರದ ಮೂಲಕ ಲಾರಿಯನ್ನು ಎಳೆದೊಯ್ದು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.