<p><strong>ವಿಜಯಪುರ: </strong>ಆಲಮಟ್ಟಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇರುವುದರಿಂದ ಆಣೆಕಟ್ಟಿನ ಕೆಳಭಾಗದ ಪ್ರದೇಶಗಳಲ್ಲಿ ಮುಳುಗಡೆಯಾಗಲಿರುವ ಎಲ್ಲ ಹಳ್ಳಿಗಳ ಹಾಗೂ ನಗರಗಳ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿಕೊಳ್ಳಬೇಕು ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.</p>.<p>ಕೃಷ್ಣಾ ನದಿ ಪಾತ್ರದಲ್ಲಿ ವ್ಯಾಪಕವಾಗಿ ಮುಂಗಾರು ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಆಣೆಕಟ್ಟೆಯಿಂದ ನೀರು ಹೊರಬಿಡಲಾಗುವುದರಿಂದ ನದಿಯ ಪಕ್ಕದ ಹಳ್ಳಿಯ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಪ್ರಕಟಣೆಯಲ್ಲಿ ಮುನ್ಸೂಚನೆ ನೀಡಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/more-inflow-to-tungabhadra-dam-743160.html" target="_blank">ಮಲೆನಾಡಿನಲ್ಲಿ ಉತ್ತಮ ಮಳೆ: ತುಂಗಭದ್ರೆ ಒಳಹರಿವು ಹೆಚ್ಚಳ</a></strong></p>.<p><strong>ಜಲಾಶಯದ ಮಟ್ಟ:</strong> 519.60 ಮೀ. ಗರಿಷ್ಠ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಬುಧವಾರ 516.30 ಮೀ. ನೀರು ಸಂಗ್ರಹವಾಗಿದೆ. ಬುಧವಾರ ಬೆಳಿಗ್ಗೆ 26,604 ಕ್ಯುಸೆಕ್ ಇದ್ದ ಒಳಹರಿವು ಸಂಜೆಯ ವೇಳೆಗೆ 30 ಸಾವಿರ ಕ್ಯುಸೆಕ್ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ 76.252 ಟಿಎಂಸಿ ಅಡಿ ನೀರು ಸಂಗ್ರಹವಿದೆ.</p>.<p><strong>ಮಹಾರಾಷ್ಟ್ರದಲ್ಲಿ ಮಳೆ:</strong>ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಯರಳವಾಡಿಯಲ್ಲಿ 400 ಮಿ.ಮೀ, ಕೊಯ್ನಾದಲ್ಲಿ 106 ಮಿ.ಮೀ, ಪಾತಗಾಂವದಲ್ಲಿ 160 ಮಿ.ಮೀ, ರಾಧಾನಗರಿಯಲ್ಲಿ 155 ಮಿ.ಮೀ ಮಳೆಯಾಗಿದೆ. ಕರ್ನಾಟಕಕ್ಕೆ ಬಂದು ಸೇರುವ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ಬಳಿ ಕೃಷ್ಣಾ ನದಿಯ ಹರಿವು 36,250 ಕ್ಯುಸೆಕ್ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಆಲಮಟ್ಟಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇರುವುದರಿಂದ ಆಣೆಕಟ್ಟಿನ ಕೆಳಭಾಗದ ಪ್ರದೇಶಗಳಲ್ಲಿ ಮುಳುಗಡೆಯಾಗಲಿರುವ ಎಲ್ಲ ಹಳ್ಳಿಗಳ ಹಾಗೂ ನಗರಗಳ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿಕೊಳ್ಳಬೇಕು ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.</p>.<p>ಕೃಷ್ಣಾ ನದಿ ಪಾತ್ರದಲ್ಲಿ ವ್ಯಾಪಕವಾಗಿ ಮುಂಗಾರು ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಆಣೆಕಟ್ಟೆಯಿಂದ ನೀರು ಹೊರಬಿಡಲಾಗುವುದರಿಂದ ನದಿಯ ಪಕ್ಕದ ಹಳ್ಳಿಯ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಪ್ರಕಟಣೆಯಲ್ಲಿ ಮುನ್ಸೂಚನೆ ನೀಡಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/more-inflow-to-tungabhadra-dam-743160.html" target="_blank">ಮಲೆನಾಡಿನಲ್ಲಿ ಉತ್ತಮ ಮಳೆ: ತುಂಗಭದ್ರೆ ಒಳಹರಿವು ಹೆಚ್ಚಳ</a></strong></p>.<p><strong>ಜಲಾಶಯದ ಮಟ್ಟ:</strong> 519.60 ಮೀ. ಗರಿಷ್ಠ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಬುಧವಾರ 516.30 ಮೀ. ನೀರು ಸಂಗ್ರಹವಾಗಿದೆ. ಬುಧವಾರ ಬೆಳಿಗ್ಗೆ 26,604 ಕ್ಯುಸೆಕ್ ಇದ್ದ ಒಳಹರಿವು ಸಂಜೆಯ ವೇಳೆಗೆ 30 ಸಾವಿರ ಕ್ಯುಸೆಕ್ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ 76.252 ಟಿಎಂಸಿ ಅಡಿ ನೀರು ಸಂಗ್ರಹವಿದೆ.</p>.<p><strong>ಮಹಾರಾಷ್ಟ್ರದಲ್ಲಿ ಮಳೆ:</strong>ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಯರಳವಾಡಿಯಲ್ಲಿ 400 ಮಿ.ಮೀ, ಕೊಯ್ನಾದಲ್ಲಿ 106 ಮಿ.ಮೀ, ಪಾತಗಾಂವದಲ್ಲಿ 160 ಮಿ.ಮೀ, ರಾಧಾನಗರಿಯಲ್ಲಿ 155 ಮಿ.ಮೀ ಮಳೆಯಾಗಿದೆ. ಕರ್ನಾಟಕಕ್ಕೆ ಬಂದು ಸೇರುವ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ಬಳಿ ಕೃಷ್ಣಾ ನದಿಯ ಹರಿವು 36,250 ಕ್ಯುಸೆಕ್ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>