<p><strong>ಬೆಂಗಳೂರು:</strong> ಜನರಿಗೆ ಅನುಕೂಲ ಕಲ್ಪಿಸುವ ಆಶಯದಿಂದ ರೂಪಿಸಿದ ಉತ್ತಮ ಮಸೂದೆಗಳನ್ನು ರಾಜ್ಯಪಾಲರು ಅಂಕಿತ ಹಾಕದೆ ವಿಳಂಬ ಮಾಡುತ್ತಿದ್ದಾರೆ. ರಾಜ್ಯಪಾಲರ ನಡೆಯ ವಿರುದ್ಧ ಕೋರ್ಟ್ ಮೊರೆ ಹೋಗುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬರ ಪರಿಹಾರ ಬಿಡುಗಡೆಯಲ್ಲೂ ಕೇಂದ್ರ ಸರ್ಕಾರ ಇಂತಹ ಧೋರಣೆ ಅನುಸರಿಸಿತ್ತು. ಕಾಲಕಾಲಕ್ಕೆ ಅಧಿಕಾರಿಗಳು ಮಾಡಿದ್ದ ಮನವಿ, ನಷ್ಟದ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ನಂತರ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತು. ಮಸೂದೆಗಳ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಿದ ನಂತರವೂ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಹೇಳುವ ಅಗತ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜನರಿಗೆ ಅನುಕೂಲ ಕಲ್ಪಿಸುವ ಆಶಯದಿಂದ ರೂಪಿಸಿದ ಉತ್ತಮ ಮಸೂದೆಗಳನ್ನು ರಾಜ್ಯಪಾಲರು ಅಂಕಿತ ಹಾಕದೆ ವಿಳಂಬ ಮಾಡುತ್ತಿದ್ದಾರೆ. ರಾಜ್ಯಪಾಲರ ನಡೆಯ ವಿರುದ್ಧ ಕೋರ್ಟ್ ಮೊರೆ ಹೋಗುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬರ ಪರಿಹಾರ ಬಿಡುಗಡೆಯಲ್ಲೂ ಕೇಂದ್ರ ಸರ್ಕಾರ ಇಂತಹ ಧೋರಣೆ ಅನುಸರಿಸಿತ್ತು. ಕಾಲಕಾಲಕ್ಕೆ ಅಧಿಕಾರಿಗಳು ಮಾಡಿದ್ದ ಮನವಿ, ನಷ್ಟದ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ನಂತರ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತು. ಮಸೂದೆಗಳ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಿದ ನಂತರವೂ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಹೇಳುವ ಅಗತ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>