ಆಯಾ ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ ಜನರು ಸ್ವಯಂ ಪ್ರೇರಿತರಾಗಿ ತಮ್ಮದೇ ಆದ ರೀತಿಯಲ್ಲಿ ಕಾರ್ಯಕ್ರಮ ನಡೆಸಬೇಕು. ಕಲಬುರ್ಗಿ ಹುಟ್ಟೂರು ವಿಜಯಪುರ ಜಿಲ್ಲೆಯ ಜನರೂ ಭಾಗವಹಿಸಲಿದ್ದಾರೆ. ಧಾರವಾಡ, ಮಂಗಳೂರು, ಶಿವಮೊಗ್ಗ, ಮೈಸೂರು, ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು. ಆಯಾ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಜನರು ತಮ್ಮದೇ ಆದ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸಬಹುದು ಎಂದು ಅವರು ಹೇಳಿದರು.