<p><strong>ನವದೆಹಲಿ</strong>: ಶರಾವತಿ ಜಲವಿದ್ಯುತ್ ಯೋಜನೆಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. </p><p>ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅವರು, ‘ಈ ಜಲ ವಿದ್ಯುತ್ ಯೋಜನೆ 1958–1964ರ ನಡುವೆ ನಿರ್ಮಾಣವಾಗಿತ್ತು. ಯೋಜನೆಗಾಗಿ ಸಾವಿರಾರು ಎಕರೆ ಭೂಸ್ವಾಧೀನ ಮಾಡಲಾಗಿತ್ತು. ನಾಲ್ಕೈದು ಸಾವಿರ ಕುಟುಂಬಗಳ ಜಾಗ ಮುಳುಗಡೆ ಆಗಿದೆ. ಈ ಯೋಜನೆಯಿಂದ ಇಡೀ ದೇಶಕ್ಕೆ ವಿದ್ಯುತ್ ಸಿಕ್ಕಿದೆ. ಆದರೆ, ಸಂತ್ರಸ್ತರು ಈಗಲೂ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ’ ಎಂದು ಗಮನ ಸೆಳೆದರು. </p><p>‘ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮುನ್ನ ರೈತರಿಗೆ ಭೂಮಿ ಕೊಡುವ ಪ್ರಯತ್ನವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ. ಇಲ್ಲಿನ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸವಲತ್ತುಗಳು ಸಿಗುತ್ತಿಲ್ಲ. ಸ್ವಂತ ಮನೆ ಕಟ್ಟಲು ಆಗುತ್ತಿಲ್ಲ. ಬ್ಯಾಂಕ್ ಸಾಲ ಸಿಗುತ್ತಿಲ್ಲ. </p><p>ಸಂತ್ರಸ್ತರಿಗೆ ಪುನವರ್ಸತಿ ಕಲ್ಪಿಸಲು 9,136 ಎಕರೆ ಅರಣ್ಯ ಪ್ರದೇಶವನ್ನು ಬಳಸುವ ಪ್ರಸ್ತಾವನೆಯನ್ನು ಹಿಂದಿನ ಸರ್ಕಾರ ಕಳುಹಿಸಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಎರಡೂ ಸರ್ಕಾರಗಳು ಡಿಸೆಂಬರ್ 3ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿವೆ. ಮುಂದಿನ ವಿಚಾರಣೆ ಜನವರಿ 20ರಂದು ನಿಗದಿಯಾಗಿದೆ. ಕೇಂದ್ರ ಅರಣ್ಯ ಸಚಿವರು ಹೆಚ್ಚಿನ ಆಸ್ಥೆ ವಹಿಸಿ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಕೊಡಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶರಾವತಿ ಜಲವಿದ್ಯುತ್ ಯೋಜನೆಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. </p><p>ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅವರು, ‘ಈ ಜಲ ವಿದ್ಯುತ್ ಯೋಜನೆ 1958–1964ರ ನಡುವೆ ನಿರ್ಮಾಣವಾಗಿತ್ತು. ಯೋಜನೆಗಾಗಿ ಸಾವಿರಾರು ಎಕರೆ ಭೂಸ್ವಾಧೀನ ಮಾಡಲಾಗಿತ್ತು. ನಾಲ್ಕೈದು ಸಾವಿರ ಕುಟುಂಬಗಳ ಜಾಗ ಮುಳುಗಡೆ ಆಗಿದೆ. ಈ ಯೋಜನೆಯಿಂದ ಇಡೀ ದೇಶಕ್ಕೆ ವಿದ್ಯುತ್ ಸಿಕ್ಕಿದೆ. ಆದರೆ, ಸಂತ್ರಸ್ತರು ಈಗಲೂ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ’ ಎಂದು ಗಮನ ಸೆಳೆದರು. </p><p>‘ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮುನ್ನ ರೈತರಿಗೆ ಭೂಮಿ ಕೊಡುವ ಪ್ರಯತ್ನವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ. ಇಲ್ಲಿನ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸವಲತ್ತುಗಳು ಸಿಗುತ್ತಿಲ್ಲ. ಸ್ವಂತ ಮನೆ ಕಟ್ಟಲು ಆಗುತ್ತಿಲ್ಲ. ಬ್ಯಾಂಕ್ ಸಾಲ ಸಿಗುತ್ತಿಲ್ಲ. </p><p>ಸಂತ್ರಸ್ತರಿಗೆ ಪುನವರ್ಸತಿ ಕಲ್ಪಿಸಲು 9,136 ಎಕರೆ ಅರಣ್ಯ ಪ್ರದೇಶವನ್ನು ಬಳಸುವ ಪ್ರಸ್ತಾವನೆಯನ್ನು ಹಿಂದಿನ ಸರ್ಕಾರ ಕಳುಹಿಸಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಎರಡೂ ಸರ್ಕಾರಗಳು ಡಿಸೆಂಬರ್ 3ರಂದು ಸುಪ್ರೀಂ ಕೋರ್ಟ್ಗೆ ತಿಳಿಸಿವೆ. ಮುಂದಿನ ವಿಚಾರಣೆ ಜನವರಿ 20ರಂದು ನಿಗದಿಯಾಗಿದೆ. ಕೇಂದ್ರ ಅರಣ್ಯ ಸಚಿವರು ಹೆಚ್ಚಿನ ಆಸ್ಥೆ ವಹಿಸಿ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಕೊಡಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>