ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಕಾಶ ಸಿಕ್ಕರೆ ರಾಜ್ಯ ರಾಜಕಾರಣಕ್ಕೆ: ಸಂಸದ ಸಿದ್ದೇಶ್ವರ

Last Updated 7 ನವೆಂಬರ್ 2022, 19:36 IST
ಅಕ್ಷರ ಗಾತ್ರ

ದಾವಣಗೆರೆ: ‘ರಾಷ್ಟ್ರ, ರಾಜ್ಯ ನಾಯಕರು ಅವಕಾಶ ನೀಡಿದಲ್ಲಿ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

‘ಲೋಕಸಭೆ ಇಲ್ಲವೇ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದರೆ ಸ್ಪರ್ಧಿಸುತ್ತೇನೆ. ಏನೂ ಬೇಡ ಮನೆಯಲ್ಲೇ ಇರಿ ಎಂದರೂ ಮನೆಯಲ್ಲೇ ಇರುತ್ತೇನೆ. ಪಕ್ಷವು ನಾನು ಮತ್ತು ತಂದೆ ಮಲ್ಲಿಕಾರ್ಜುನಪ್ಪ ಅವರಿಗೆ ಸತತ 7 ಬಾರಿ ಲೋಕಸಭೆಗೆ ಟಿಕೆಟ್ ನೀಡಿದೆ. 6 ಬಾರಿ ಗೆದ್ದಿದ್ದೇವೆ. ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಮುಖಂಡರು ಹೇಳಿದಂತೆ ನಡೆದುಕೊಳ್ಳುತ್ತೇನೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯ ರಾಜಕಾರಣಕ್ಕೆ ಬರುವುದಕ್ಕೆ ಇಷ್ಟ ಇಲ್ಲ. ಆದರೆ, ಪಕ್ಷ ಹೇಗೆ ಹೇಳುತ್ತದೋ ಹಾಗೆಯೇ ನಡೆದುಕೊಳ್ಳುತ್ತೇನೆ. ಪಕ್ಷಕ್ಕೆ ವ್ಯತಿರಿಕ್ತವಾಗಿ ಏನೂ ಮಾಡಲಾಗದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT