<p><strong>ಚಿಕ್ಕಬಳ್ಳಾಪುರ</strong>: ‘ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ನವರು ಶೇ 40ರಷ್ಟು ಕಮಿಷನ್ ಎಂದು ಸುಳ್ಳು ಆರೋಪ ಮಾಡಿದರು. ಆಗ ಇವರ ಬಳಿ ಯಾವ ಪುರಾವೆ ಇತ್ತು’ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ‘ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದಾರೆ. ಹೀಗಿದ್ದರೂ ಸಚಿವರು ಸಾಕ್ಷ್ಯಾಧಾರಗಳು ಇಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ, ಇದೇ ಗುತ್ತಿಗೆದಾರರ ಸಂಘವು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಆಗ ಯಾವ ಸಚಿವರು, ಅಧಿಕಾರಿಗಳು ಕಮಿಷನ್ ಪಡೆದಿದ್ದಾರೆ ಎನ್ನುವ ಪುರಾವೆ ಇದ್ದವು’ ಎಂದು ಪ್ರಶ್ನಿಸಿದರು.</p>.<p>‘ರಾಜಕೀಯ ತೆವಲಿಗೆ ‘ಪೇ ಸಿ.ಎಂ’ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೋಸ್ಟರ್ ಅಂಟಿಸಿದರು. ಆದರೆ ಈಗ ಗುತ್ತಿಗೆದಾರರ ಸಂಘದ ಆರೋಪಗಳಿಗೆ ಪುರಾವೆ ಇಲ್ಲ ಎನ್ನುತ್ತಾರೆ’ ಎಂದು ಹೇಳಿದರು.</p>.<p>‘ನಾನು ಕಾಂಗ್ರೆಸ್ನಲ್ಲಿದ್ದ ವೇಳೆ ಅಂದೇ ಎಚ್.ಡಿ.ಕುಮಾರಸ್ವಾಮಿ ಅವರು ಇದು ಎತ್ತಿನಹೊಳೆಯಲ್ಲ ಹಣದ ಹೊಳೆ ಎಂದಿದ್ದರು. ಅವರ ಮಾತು ಸತ್ಯವಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಈ ಯೋಜನೆ ರೂಪಿಸಲಾಗಿತ್ತು. ಸಾವಿರಾರು ಕೋಟಿ ವೆಚ್ಚವಾದರೂ ಇನ್ನೂ ಈ ಜಿಲ್ಲೆಗಳಿಗೆ ನೀರು ಬಂದಿಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ನವರು ಶೇ 40ರಷ್ಟು ಕಮಿಷನ್ ಎಂದು ಸುಳ್ಳು ಆರೋಪ ಮಾಡಿದರು. ಆಗ ಇವರ ಬಳಿ ಯಾವ ಪುರಾವೆ ಇತ್ತು’ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ‘ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದಾರೆ. ಹೀಗಿದ್ದರೂ ಸಚಿವರು ಸಾಕ್ಷ್ಯಾಧಾರಗಳು ಇಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ, ಇದೇ ಗುತ್ತಿಗೆದಾರರ ಸಂಘವು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಆಗ ಯಾವ ಸಚಿವರು, ಅಧಿಕಾರಿಗಳು ಕಮಿಷನ್ ಪಡೆದಿದ್ದಾರೆ ಎನ್ನುವ ಪುರಾವೆ ಇದ್ದವು’ ಎಂದು ಪ್ರಶ್ನಿಸಿದರು.</p>.<p>‘ರಾಜಕೀಯ ತೆವಲಿಗೆ ‘ಪೇ ಸಿ.ಎಂ’ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೋಸ್ಟರ್ ಅಂಟಿಸಿದರು. ಆದರೆ ಈಗ ಗುತ್ತಿಗೆದಾರರ ಸಂಘದ ಆರೋಪಗಳಿಗೆ ಪುರಾವೆ ಇಲ್ಲ ಎನ್ನುತ್ತಾರೆ’ ಎಂದು ಹೇಳಿದರು.</p>.<p>‘ನಾನು ಕಾಂಗ್ರೆಸ್ನಲ್ಲಿದ್ದ ವೇಳೆ ಅಂದೇ ಎಚ್.ಡಿ.ಕುಮಾರಸ್ವಾಮಿ ಅವರು ಇದು ಎತ್ತಿನಹೊಳೆಯಲ್ಲ ಹಣದ ಹೊಳೆ ಎಂದಿದ್ದರು. ಅವರ ಮಾತು ಸತ್ಯವಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಈ ಯೋಜನೆ ರೂಪಿಸಲಾಗಿತ್ತು. ಸಾವಿರಾರು ಕೋಟಿ ವೆಚ್ಚವಾದರೂ ಇನ್ನೂ ಈ ಜಿಲ್ಲೆಗಳಿಗೆ ನೀರು ಬಂದಿಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>