ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ವಿಶೇಷ ವಕೀಲ ಸಿ.ಜಗದೀಶ್, ‘ದಾರಕೇಶ್ವರಯ್ಯ ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದಿದ್ದ ಬೇಡ ಜಂಗಮ ಜಾತಿ ಪ್ರಮಾಣಪತ್ರ ರದ್ದಾಗಿತ್ತು. ಈಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಇದೇ ರೀತಿಯ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದಾರೆ. ಎರಡೆರಡು ಬಾರಿ ಇಂತಹ ಪ್ರಮಾಣಪತ್ರ ಪಡೆದು ಬಣ್ಣ ಬದಲಾಯಿಸುವ ಮೂಲಕ ಕಾನೂನಿನ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ’ ಎಂದು ದೂರಿದರು.