<p><strong>ಬೆಂಗಳೂರು:</strong> ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳಬೇಕು. ಯಾಕೆಂದರೆ ಮಹಿಳೆಯರು ಧರಿಸುವ ಉಡುಪುಗಳನ್ನು ನೋಡಿ ಪುರುಷರು ಉದ್ರೇಕಗೊಳ್ಳುತ್ತಾರೆ. ಅದರಿಂದ ಅತ್ಯಾಚಾರ ಪ್ರಕರಣಗಳೂ ಹೆಚ್ಚಲು ಕಾರಣ ಎಂದು ಹೊನ್ನಾಳಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.</p>.<p>ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ 'ಬಿಕಿನಿ ಅಥವಾ ಹಿಜಾಬ್ ಧರಿಸುವುದು ಮಹಿಳೆಯರ ಹಕ್ಕು' ಎಂಬ ಹೇಳಿಕೆಯನ್ನು ವಿರೋಧಿಸಿ ರೇಣುಕಾಚಾರ್ಯ ಅವರು ಕರ್ನಾಟಕ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>'ಅತ್ಯಾಚಾರ ಪ್ರಕರಣಗಳು ಹೆಚ್ಚಲು ಮಹಿಳೆಯರ ಉಡುಪೇ ಕಾರಣ ಎಂಬ ಹೇಳಿಕೆ ನೀಡಿರುವುದು ದುರುದ್ದೇಶದಿಂದ ಅಲ್ಲ. ಈ ಹೇಳಿಕೆಯಿಂದ ಮಹಿಳೆಯರಿಗೆ ನೋವಾಗಿದ್ದಲ್ಲಿ ಕ್ಷಮೆ ಕೋರುವೆ' ಎಂದು ಕೊನೆಗೆ ರೇಣುಕಾಚಾರ್ಯ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಮಹಿಳೆಯರು ಮೈತುಂಬ ಬಟ್ಟೆ ಹಾಕಬೇಕು. ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಮಹಿಳೆಯರ ಉಡುಪೇ ಕಾರಣ ಎಂಬ ರೇಣುಕಾಚಾರ್ಯ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.</p>.<p><a href="https://www.prajavani.net/karnataka-news/karnataka-hijab-row-renukacharya-hits-against-priyanka-gandhi-vadra-909380.html" itemprop="url">ಬಿಕಿನಿ ಪದ ಬಳಸಿದ ಪ್ರಿಯಾಂಕಾ ಮಹಿಳೆಯರ ಕ್ಷಮೆ ಕೋರಲಿ: ರೇಣುಕಾಚಾರ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳಬೇಕು. ಯಾಕೆಂದರೆ ಮಹಿಳೆಯರು ಧರಿಸುವ ಉಡುಪುಗಳನ್ನು ನೋಡಿ ಪುರುಷರು ಉದ್ರೇಕಗೊಳ್ಳುತ್ತಾರೆ. ಅದರಿಂದ ಅತ್ಯಾಚಾರ ಪ್ರಕರಣಗಳೂ ಹೆಚ್ಚಲು ಕಾರಣ ಎಂದು ಹೊನ್ನಾಳಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.</p>.<p>ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ 'ಬಿಕಿನಿ ಅಥವಾ ಹಿಜಾಬ್ ಧರಿಸುವುದು ಮಹಿಳೆಯರ ಹಕ್ಕು' ಎಂಬ ಹೇಳಿಕೆಯನ್ನು ವಿರೋಧಿಸಿ ರೇಣುಕಾಚಾರ್ಯ ಅವರು ಕರ್ನಾಟಕ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>'ಅತ್ಯಾಚಾರ ಪ್ರಕರಣಗಳು ಹೆಚ್ಚಲು ಮಹಿಳೆಯರ ಉಡುಪೇ ಕಾರಣ ಎಂಬ ಹೇಳಿಕೆ ನೀಡಿರುವುದು ದುರುದ್ದೇಶದಿಂದ ಅಲ್ಲ. ಈ ಹೇಳಿಕೆಯಿಂದ ಮಹಿಳೆಯರಿಗೆ ನೋವಾಗಿದ್ದಲ್ಲಿ ಕ್ಷಮೆ ಕೋರುವೆ' ಎಂದು ಕೊನೆಗೆ ರೇಣುಕಾಚಾರ್ಯ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಮಹಿಳೆಯರು ಮೈತುಂಬ ಬಟ್ಟೆ ಹಾಕಬೇಕು. ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಮಹಿಳೆಯರ ಉಡುಪೇ ಕಾರಣ ಎಂಬ ರೇಣುಕಾಚಾರ್ಯ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.</p>.<p><a href="https://www.prajavani.net/karnataka-news/karnataka-hijab-row-renukacharya-hits-against-priyanka-gandhi-vadra-909380.html" itemprop="url">ಬಿಕಿನಿ ಪದ ಬಳಸಿದ ಪ್ರಿಯಾಂಕಾ ಮಹಿಳೆಯರ ಕ್ಷಮೆ ಕೋರಲಿ: ರೇಣುಕಾಚಾರ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>