ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಈಗಾಗಲೇ ತೀರ್ಮಾನಿಸಿದೆ. ಹೀಗಾಗಿ, ಕ್ಷೇತ್ರವನ್ನು ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸುಮಲತಾ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಕೊನೆಯ ಪ್ರಯತ್ನ ಮಾಡಿದರು. ಮಂಡ್ಯದಲ್ಲಿ ಸುಮಲತಾ ಅವರನ್ನು ಹುರಿಯಾಳುವನ್ನಾಗಿ ಮಾಡುವ ಬಗ್ಗೆ ನಡ್ಡಾ ಯಾವುದೇ ಭರವಸೆ ನೀಡಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸುಮಲತಾ ಮಂಗಳವಾರ ಭೇಟಿ ಮಾಡಲಿದ್ದಾರೆ. ಬಳಿಕ ಮಂಡ್ಯದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.