<p><strong>ಬೆಂಗಳೂರು</strong>: ‘ಮದ್ಯದ ಅಂಗಡಿಗಳ ಉಪಗುತ್ತಿಗೆ ನೀಡುವಾಗ ಜನಪ್ರತಿನಿಧಿಗಳು ನೀಡುವ ಶಿಫಾರಸು ಆಧಾರಿಸಿ ಕಾರ್ಯನಿರ್ವಹಿಸುವುದಿಲ್ಲ’ ಎಂದು ಹೈಕೋರ್ಟ್ಗೆ ಎಂಎಸ್ಐಎಲ್(ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) ಅಫಿಡವಿಟ್ ಸಲ್ಲಿಸಿದೆ.</p>.<p>ಪಶುಸಂಗೋಪನಾ ಸಚಿವ ಪ್ರಭು ಬಿ. ಚೌವ್ಹಾಣ್ ನೀಡಿದ್ದ ಶಿಫಾರಸು ಪತ್ರದೊಂದಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಅಫಿಡವಿಟ್ ಸಲ್ಲಿಸುವಂತೆ ಎಂಎಸ್ಐಎಲ್ಗೆ ನಿರ್ದೇಶನ ನೀಡಿತ್ತು.</p>.<p>‘ಜನಪ್ರತಿನಿಧಿಗಳ ಶಿಫಾರಸು ಅಥವಾ ಟಿಪ್ಪಣಿಗಳಿಗೆ ಪ್ರಭಾವಿತರಾಗುವುದಿಲ್ಲ. ಸ್ಥಳ ಪರಿಶೀಲನೆ ನಡೆಸಿ ಅಬಕಾರಿ ಕಾಯ್ದೆ ಪ್ರಕಾರ ವಸ್ತುನಿಷ್ಟವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಎಂಎಸ್ಐಲ್ ವ್ಯವಸ್ಥಾಪಕ ನಿರ್ದೇಶಕ ಎಚ್.ಪಿ. ಪ್ರಕಾಶ್ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.</p>.<p>ಬೀದರ್ ಜಿಲ್ಲೆಯಸೋಮನಾಥ್ ಎಂಬುವರು ಪಿಐಎಲ್ ಸಲ್ಲಿಸಿ, ‘ವಿಧಾನಸಭಾ ಕ್ಷೇತ್ರವಾರುಎಂಎಸ್ಐಎಲ್ಮದ್ಯ ಮಳಿಗೆ ತೆರೆಯುವ ಸಂಬಂಧ ಅಬಕಾರಿ ಇಲಾಖೆ ಹೊರಡಿಸಿದ ಆದೇಶವು ಜನಪ್ರತಿನಿಧಿಗಳು ತಮ್ಮ ಬೆಂಬಲಿಗರಿಗೆ ಪರವಾನಗಿ ಕೊಡಿಸಲು ಅನುಕೂಲವಾಗುತ್ತಿದೆ’ ಎಂದು ದೂರಿದ್ದರು.‘ಅದು ಶಿಫಾರಸು ಅಲ್ಲ, ಮನವಿಯ ಟಿಪ್ಪಣಿ’ ಎಂದು ಸಚಿವರು ಅಫಿಡವಿಟ್ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮದ್ಯದ ಅಂಗಡಿಗಳ ಉಪಗುತ್ತಿಗೆ ನೀಡುವಾಗ ಜನಪ್ರತಿನಿಧಿಗಳು ನೀಡುವ ಶಿಫಾರಸು ಆಧಾರಿಸಿ ಕಾರ್ಯನಿರ್ವಹಿಸುವುದಿಲ್ಲ’ ಎಂದು ಹೈಕೋರ್ಟ್ಗೆ ಎಂಎಸ್ಐಎಲ್(ಮೈಸೂರ್ ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) ಅಫಿಡವಿಟ್ ಸಲ್ಲಿಸಿದೆ.</p>.<p>ಪಶುಸಂಗೋಪನಾ ಸಚಿವ ಪ್ರಭು ಬಿ. ಚೌವ್ಹಾಣ್ ನೀಡಿದ್ದ ಶಿಫಾರಸು ಪತ್ರದೊಂದಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಅಫಿಡವಿಟ್ ಸಲ್ಲಿಸುವಂತೆ ಎಂಎಸ್ಐಎಲ್ಗೆ ನಿರ್ದೇಶನ ನೀಡಿತ್ತು.</p>.<p>‘ಜನಪ್ರತಿನಿಧಿಗಳ ಶಿಫಾರಸು ಅಥವಾ ಟಿಪ್ಪಣಿಗಳಿಗೆ ಪ್ರಭಾವಿತರಾಗುವುದಿಲ್ಲ. ಸ್ಥಳ ಪರಿಶೀಲನೆ ನಡೆಸಿ ಅಬಕಾರಿ ಕಾಯ್ದೆ ಪ್ರಕಾರ ವಸ್ತುನಿಷ್ಟವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಎಂಎಸ್ಐಲ್ ವ್ಯವಸ್ಥಾಪಕ ನಿರ್ದೇಶಕ ಎಚ್.ಪಿ. ಪ್ರಕಾಶ್ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.</p>.<p>ಬೀದರ್ ಜಿಲ್ಲೆಯಸೋಮನಾಥ್ ಎಂಬುವರು ಪಿಐಎಲ್ ಸಲ್ಲಿಸಿ, ‘ವಿಧಾನಸಭಾ ಕ್ಷೇತ್ರವಾರುಎಂಎಸ್ಐಎಲ್ಮದ್ಯ ಮಳಿಗೆ ತೆರೆಯುವ ಸಂಬಂಧ ಅಬಕಾರಿ ಇಲಾಖೆ ಹೊರಡಿಸಿದ ಆದೇಶವು ಜನಪ್ರತಿನಿಧಿಗಳು ತಮ್ಮ ಬೆಂಬಲಿಗರಿಗೆ ಪರವಾನಗಿ ಕೊಡಿಸಲು ಅನುಕೂಲವಾಗುತ್ತಿದೆ’ ಎಂದು ದೂರಿದ್ದರು.‘ಅದು ಶಿಫಾರಸು ಅಲ್ಲ, ಮನವಿಯ ಟಿಪ್ಪಣಿ’ ಎಂದು ಸಚಿವರು ಅಫಿಡವಿಟ್ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>