<p><strong>ತುಮಕೂರು</strong>: ಕೊಬ್ಬರಿ ಬೆಲೆ ತೀವ್ರವಾಗಿ ಕುಸಿದಿದ್ದು, ಬೆಂಬಲ ಬೆಲೆ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ₹18 ಸಾವಿರವಿದ್ದ ಕ್ವಿಂಟಲ್ ಕೊಬ್ಬರಿ ಈಗ ₹9 ಸಾವಿರಕ್ಕೆ ಇಳಿದಿದೆ. ಯಾವ ರೀತಿಯಲ್ಲಿ ಬೆಂಬಲ ಬೆಲೆ ಕೊಟ್ಟು, ಸಮಸ್ಯೆ ಪರಿಹರಿಸಬೇಕು ಎಂಬ ಬಗ್ಗೆ ಚರ್ಚಿಸಲಾಗುವುದು’ ಎಂದರು.</p><p>ಸುಳ್ಳು ಸುದ್ದಿ: ‘ಕಚೇರಿಗಳಿಗೆ ಬರುವಾಗ ಕುಂಕುಮ, ವಿಭೂತಿ ಇಟ್ಟುಕೊಂಡು ಬರಬಾರದು ಎಂದು ನಾನು ಎಲ್ಲೂ ಹೇಳಿಲ್ಲ. ಈ ರೀತಿ ಬರೆಯುವುದು ಪ್ರಚೋದನೆಯಾಗುತ್ತದೆ. ನನಗೆ ಪ್ರಜ್ಞೆ ಇದೆ. ಜವಾಬ್ದಾರಿಯುತ ಸಚಿವನಾಗಿ ಈ ರೀತಿ ಹೇಳಲು ಸಾಧ್ಯವಿಲ್ಲ. ಸರ್ಕಾರದ ನಿಯಮದಂತೆ ಎಲ್ಲರೂ ನಡೆದುಕೊಳ್ಳಬೇಕಾಗುತ್ತದೆ. ನಾನು ಗೃಹ ಸಚಿವನಾಗಿದ್ದಾಗ ಒಂದು ಕಾನೂನು, ಬೇರೆಯವರು ಸಚಿವರಾದಾಗ ಮತ್ತೊಂದು ಕಾನೂನು ಮಾಡಲು ಬರುವುದಿಲ್ಲ. ಯಾರು ಸುಳ್ಳು ಸುದ್ದಿ ಬರೆದಿದ್ದಾರೆ ಎಂಬುದನ್ನು ಪತ್ತೆಮಾಡುವ ಕೆಲಸ ನಡೆದಿದೆ’ ಎಂದು ತಿಳಿಸಿದರು.</p>.<p>ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಕರಾವಳಿ ಭಾಗಕ್ಕೂ ಮಳೆ ಬರಲಿದೆ. ಆದಷ್ಟು ಬೇಗ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಬಹುದು. ಈಗಾಗಲೇ ಜಿಲ್ಲೆಯಲ್ಲಿ ಮಳೆ ಕೊರತೆಯಾಗಿದ್ದು, ಇನ್ನೊಂದು ವಾರದಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಲಿದೆ ಎಂದು ಹೇಳಿದರು.</p><p>ಬಿತ್ತನೆ ಬೀಜ, ಗೊಬ್ಬರದ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಈಗಾಗಲೇ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ, ಸಚಿವರು ಪರಿಶೀಲನೆ ನಡೆಸಿ ಕೆಲವು ನಿರ್ದೇಶನ ನೀಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕೊಬ್ಬರಿ ಬೆಲೆ ತೀವ್ರವಾಗಿ ಕುಸಿದಿದ್ದು, ಬೆಂಬಲ ಬೆಲೆ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ₹18 ಸಾವಿರವಿದ್ದ ಕ್ವಿಂಟಲ್ ಕೊಬ್ಬರಿ ಈಗ ₹9 ಸಾವಿರಕ್ಕೆ ಇಳಿದಿದೆ. ಯಾವ ರೀತಿಯಲ್ಲಿ ಬೆಂಬಲ ಬೆಲೆ ಕೊಟ್ಟು, ಸಮಸ್ಯೆ ಪರಿಹರಿಸಬೇಕು ಎಂಬ ಬಗ್ಗೆ ಚರ್ಚಿಸಲಾಗುವುದು’ ಎಂದರು.</p><p>ಸುಳ್ಳು ಸುದ್ದಿ: ‘ಕಚೇರಿಗಳಿಗೆ ಬರುವಾಗ ಕುಂಕುಮ, ವಿಭೂತಿ ಇಟ್ಟುಕೊಂಡು ಬರಬಾರದು ಎಂದು ನಾನು ಎಲ್ಲೂ ಹೇಳಿಲ್ಲ. ಈ ರೀತಿ ಬರೆಯುವುದು ಪ್ರಚೋದನೆಯಾಗುತ್ತದೆ. ನನಗೆ ಪ್ರಜ್ಞೆ ಇದೆ. ಜವಾಬ್ದಾರಿಯುತ ಸಚಿವನಾಗಿ ಈ ರೀತಿ ಹೇಳಲು ಸಾಧ್ಯವಿಲ್ಲ. ಸರ್ಕಾರದ ನಿಯಮದಂತೆ ಎಲ್ಲರೂ ನಡೆದುಕೊಳ್ಳಬೇಕಾಗುತ್ತದೆ. ನಾನು ಗೃಹ ಸಚಿವನಾಗಿದ್ದಾಗ ಒಂದು ಕಾನೂನು, ಬೇರೆಯವರು ಸಚಿವರಾದಾಗ ಮತ್ತೊಂದು ಕಾನೂನು ಮಾಡಲು ಬರುವುದಿಲ್ಲ. ಯಾರು ಸುಳ್ಳು ಸುದ್ದಿ ಬರೆದಿದ್ದಾರೆ ಎಂಬುದನ್ನು ಪತ್ತೆಮಾಡುವ ಕೆಲಸ ನಡೆದಿದೆ’ ಎಂದು ತಿಳಿಸಿದರು.</p>.<p>ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಕರಾವಳಿ ಭಾಗಕ್ಕೂ ಮಳೆ ಬರಲಿದೆ. ಆದಷ್ಟು ಬೇಗ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಬಹುದು. ಈಗಾಗಲೇ ಜಿಲ್ಲೆಯಲ್ಲಿ ಮಳೆ ಕೊರತೆಯಾಗಿದ್ದು, ಇನ್ನೊಂದು ವಾರದಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಲಿದೆ ಎಂದು ಹೇಳಿದರು.</p><p>ಬಿತ್ತನೆ ಬೀಜ, ಗೊಬ್ಬರದ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಈಗಾಗಲೇ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ, ಸಚಿವರು ಪರಿಶೀಲನೆ ನಡೆಸಿ ಕೆಲವು ನಿರ್ದೇಶನ ನೀಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>