<p><strong>ನವದೆಹಲಿ:</strong> ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಗರಣದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ದೋಷಮುಕ್ತರನ್ನಾಗಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. </p>.<p>‘ಪ್ರಾಧಿಕಾರವು 107 ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚಿಕೆ ಮಾಡಿದೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಹಾಗೂ ಕೆಪಿಸಿಸಿ ಸದಸ್ಯ ಟಿ.ಎಸ್.ಸತ್ಯಾನಂದ ಆರೋಪಿಸಿದ್ದರು. 2011ರ ಅ.17ರಂದು ಈ ಹಗರಣ ಬೆಳಕಿಗೆ ಬಂದಿತ್ತು. ಸರ್ಕಾರ ಇದನ್ನು ಸಿಬಿಐ ತನಿಖೆಗೆ ವಹಿಸಿತ್ತು.</p>.<p>‘ಪುಟ್ಟರಾಜು ಅವರ ಪತ್ನಿ ಈ ಮೊದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದಿದ್ದರು. ಇದನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಿಂದಲೂ ನಿವೇಶನ ಪಡೆದಿದ್ದಾರೆ’ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<p>ಪ್ರಕರಣದಿಂದ ಕೈಬಿಡುವಂತೆ ಕೋರಿ ಪುಟ್ಟರಾಜು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಪುಟ್ಟರಾಜು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಕೋಟೀಶ್ವರ್ ಸಿಂಗ್ ಪೀಠವು ಅರ್ಜಿ ವಜಾ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಗರಣದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ದೋಷಮುಕ್ತರನ್ನಾಗಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. </p>.<p>‘ಪ್ರಾಧಿಕಾರವು 107 ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚಿಕೆ ಮಾಡಿದೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಹಾಗೂ ಕೆಪಿಸಿಸಿ ಸದಸ್ಯ ಟಿ.ಎಸ್.ಸತ್ಯಾನಂದ ಆರೋಪಿಸಿದ್ದರು. 2011ರ ಅ.17ರಂದು ಈ ಹಗರಣ ಬೆಳಕಿಗೆ ಬಂದಿತ್ತು. ಸರ್ಕಾರ ಇದನ್ನು ಸಿಬಿಐ ತನಿಖೆಗೆ ವಹಿಸಿತ್ತು.</p>.<p>‘ಪುಟ್ಟರಾಜು ಅವರ ಪತ್ನಿ ಈ ಮೊದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದಿದ್ದರು. ಇದನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಿಂದಲೂ ನಿವೇಶನ ಪಡೆದಿದ್ದಾರೆ’ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<p>ಪ್ರಕರಣದಿಂದ ಕೈಬಿಡುವಂತೆ ಕೋರಿ ಪುಟ್ಟರಾಜು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಪುಟ್ಟರಾಜು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಕೋಟೀಶ್ವರ್ ಸಿಂಗ್ ಪೀಠವು ಅರ್ಜಿ ವಜಾ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>