<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರು, ಮಂಡ್ಯ, ಕೊಪ್ಪಳ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆ ನಡೆಸಿದರು.</p>.<p>ಬೆಂಗಳೂರಿನಲ್ಲಿ ಪಕ್ಷದ ಕಚೇರಿ ಬಳಿಯೇ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಸಿದ್ದರಾಮಯ್ಯ ಅವರು ಸಂವಿಧಾನ, ಪ್ರಜಾಪ್ರಭುತ್ವ, ನ್ಯಾಯಾಂಗಕ್ಕೆ ಗೌರವ ಕೊಡುವುದಾದರೆ ಕೂಡಲೇ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಒತ್ತಾಯಿಸಿದರು. </p>.<p>ವಿಧಾನಪರಿಷತ್ ವಿರೋಧ ಪಕ್ಷದ ಸಚೇತಕ ಎನ್.ರವಿಕುಮಾರ್ ಮಾತನಾಡಿ, ‘ಪಾರ್ವತಿ ಮೇಡಂ ಅವರು ನಿಮ್ಮ ಪತ್ನಿ. ನಿಮ್ಮ ಕುಟುಂಬದವರೇ ಆಗಿದ್ದಾರೆ. ಪತ್ನಿ ಮಾಡಿದ ವ್ಯವಹಾರಕ್ಕೂ ತಮಗೂ ಸಂಬಂಧವಿಲ್ಲ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನೈತಿಕೆ ಹೊಣೆಗಾರಿಕೆ ನಿಮ್ಮದೇ ಆಗಿದೆ’ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಕುರ್ಚಿ ಉಳಿಸಿಕೊಳ್ಳಲು ಭಂಡತನದಿಂದ ಪ್ರಯತ್ನ ಮಾಡಿದವರ ಇತಿಹಾಸ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಕರ್ನಾಟಕ ರಾಜ್ಯದ ಗೌರವ ಉಳಿಸುವ ದೃಷ್ಟಿಯಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ’ ಎಂದು ಒತ್ತಾಯಿಸಿದರು.</p>.<p>ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ರಾಜ್ಯ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರು, ಮಂಡ್ಯ, ಕೊಪ್ಪಳ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆ ನಡೆಸಿದರು.</p>.<p>ಬೆಂಗಳೂರಿನಲ್ಲಿ ಪಕ್ಷದ ಕಚೇರಿ ಬಳಿಯೇ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಸಿದ್ದರಾಮಯ್ಯ ಅವರು ಸಂವಿಧಾನ, ಪ್ರಜಾಪ್ರಭುತ್ವ, ನ್ಯಾಯಾಂಗಕ್ಕೆ ಗೌರವ ಕೊಡುವುದಾದರೆ ಕೂಡಲೇ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಒತ್ತಾಯಿಸಿದರು. </p>.<p>ವಿಧಾನಪರಿಷತ್ ವಿರೋಧ ಪಕ್ಷದ ಸಚೇತಕ ಎನ್.ರವಿಕುಮಾರ್ ಮಾತನಾಡಿ, ‘ಪಾರ್ವತಿ ಮೇಡಂ ಅವರು ನಿಮ್ಮ ಪತ್ನಿ. ನಿಮ್ಮ ಕುಟುಂಬದವರೇ ಆಗಿದ್ದಾರೆ. ಪತ್ನಿ ಮಾಡಿದ ವ್ಯವಹಾರಕ್ಕೂ ತಮಗೂ ಸಂಬಂಧವಿಲ್ಲ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನೈತಿಕೆ ಹೊಣೆಗಾರಿಕೆ ನಿಮ್ಮದೇ ಆಗಿದೆ’ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಕುರ್ಚಿ ಉಳಿಸಿಕೊಳ್ಳಲು ಭಂಡತನದಿಂದ ಪ್ರಯತ್ನ ಮಾಡಿದವರ ಇತಿಹಾಸ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಕರ್ನಾಟಕ ರಾಜ್ಯದ ಗೌರವ ಉಳಿಸುವ ದೃಷ್ಟಿಯಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ’ ಎಂದು ಒತ್ತಾಯಿಸಿದರು.</p>.<p>ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ರಾಜ್ಯ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>