<p><strong>ಬೆಂಗಳೂರು:</strong> ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ದಲಿತ ವ್ಯಕ್ತಿಯೊಬ್ಬರಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಕಬಳಿಸಿ, ಸಿದ್ದರಾಮಯ್ಯ ಮನೆ ಕಟ್ಟಿಸಿದ್ದರು. ಅವರ ಮತ್ತು ಅವರ ಕುಟುಂಬದ ಹಗರಣಗಳು ಒಂದೆರಡಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.</p>.<p>ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ದಲಿತ ಅಂಗವಿಕಲ ವ್ಯಕ್ತಿಯೊಬ್ಬರಿಗೆ 10,000 ಚದರ ಅಡಿ ನಿವೇಶನ ಮಂಜೂರು ಮಾಡಿದ್ದ ಮುಡಾ, ಅವರಿಂದ ₹24,000 ಕಟ್ಟಿಸಿಕೊಂಡಿತ್ತು. ಆ ನಿವೇಶನಕ್ಕೆ ಸಂಬಂಧಿಸಿದಂತೆ ಸಾಕಮ್ಮ ಎಂಬುವವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿದ್ದ ಸಿದ್ದರಾಮಯ್ಯ ಅವರು ಮನೆ ನಿರ್ಮಿಸಿದ್ದರು’ ಎಂದು ಆಪಾದಿಸಿದರು.</p>.<p>‘ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಈ ಭೂಕಬಳಿಕೆ ಮಾಡಿದ್ದಾರೆ. ಇದು ಬಹಿರಂಗವಾಗುತ್ತದೆ ಎಂದು ಆ ಮನೆಯನ್ನು ಮಾರಾಟ ಮಾಡುವ ನಾಟಕ ಆಡಿದರು. ಆದರೆ ಮನೆಯನ್ನು ಯಾರಿಗೆ ಮಾರಿದರು? ನಿಜಕ್ಕೂ ಮನೆ ಮಾರಿದ್ದಾರೆಯೇ ಎಂಬುದನ್ನು ತೆಗೆದು ನೋಡಿದರೆ, ಅದು ಇನ್ನೊಂದು ಹಗರಣವಾಗುತ್ತದೆ’ ಎಂದರು.</p>.<p>‘ಜನರಿಗೆ ಇದೆಲ್ಲಾ ಮರೆತುಹೋಗಿರಬಹುದು. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳೂ ನನ್ನ ಬಳಿ ಇವೆ. ಅಗತ್ಯವಿದ್ದರೆ ಈ ಎಲ್ಲ ದಾಖಲೆಗಳನ್ನು ಕೊಡುತ್ತೇನೆ’ ಎಂದರು.</p>.<p>‘ನಾನು ರೈತರಿಗೆ ಏನು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿದ್ದು ನಾನಲ್ಲವೇ? ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ಪೂರ್ಣ ಪ್ರಮಾಣದಲ್ಲಿ ನೀಡಿದ್ದು ನಾನು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ದಲಿತ ವ್ಯಕ್ತಿಯೊಬ್ಬರಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಕಬಳಿಸಿ, ಸಿದ್ದರಾಮಯ್ಯ ಮನೆ ಕಟ್ಟಿಸಿದ್ದರು. ಅವರ ಮತ್ತು ಅವರ ಕುಟುಂಬದ ಹಗರಣಗಳು ಒಂದೆರಡಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.</p>.<p>ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ದಲಿತ ಅಂಗವಿಕಲ ವ್ಯಕ್ತಿಯೊಬ್ಬರಿಗೆ 10,000 ಚದರ ಅಡಿ ನಿವೇಶನ ಮಂಜೂರು ಮಾಡಿದ್ದ ಮುಡಾ, ಅವರಿಂದ ₹24,000 ಕಟ್ಟಿಸಿಕೊಂಡಿತ್ತು. ಆ ನಿವೇಶನಕ್ಕೆ ಸಂಬಂಧಿಸಿದಂತೆ ಸಾಕಮ್ಮ ಎಂಬುವವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿದ್ದ ಸಿದ್ದರಾಮಯ್ಯ ಅವರು ಮನೆ ನಿರ್ಮಿಸಿದ್ದರು’ ಎಂದು ಆಪಾದಿಸಿದರು.</p>.<p>‘ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಈ ಭೂಕಬಳಿಕೆ ಮಾಡಿದ್ದಾರೆ. ಇದು ಬಹಿರಂಗವಾಗುತ್ತದೆ ಎಂದು ಆ ಮನೆಯನ್ನು ಮಾರಾಟ ಮಾಡುವ ನಾಟಕ ಆಡಿದರು. ಆದರೆ ಮನೆಯನ್ನು ಯಾರಿಗೆ ಮಾರಿದರು? ನಿಜಕ್ಕೂ ಮನೆ ಮಾರಿದ್ದಾರೆಯೇ ಎಂಬುದನ್ನು ತೆಗೆದು ನೋಡಿದರೆ, ಅದು ಇನ್ನೊಂದು ಹಗರಣವಾಗುತ್ತದೆ’ ಎಂದರು.</p>.<p>‘ಜನರಿಗೆ ಇದೆಲ್ಲಾ ಮರೆತುಹೋಗಿರಬಹುದು. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳೂ ನನ್ನ ಬಳಿ ಇವೆ. ಅಗತ್ಯವಿದ್ದರೆ ಈ ಎಲ್ಲ ದಾಖಲೆಗಳನ್ನು ಕೊಡುತ್ತೇನೆ’ ಎಂದರು.</p>.<p>‘ನಾನು ರೈತರಿಗೆ ಏನು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿದ್ದು ನಾನಲ್ಲವೇ? ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ಪೂರ್ಣ ಪ್ರಮಾಣದಲ್ಲಿ ನೀಡಿದ್ದು ನಾನು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>