<p><strong>ಬೆಂಗಳೂರು</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಪ್ರಕರಣದಲ್ಲಿ, ಮುಡಾದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿರುವ ಜಾರಿ ನಿರ್ದೇಶನಾಲಯವು (ಇ.ಡಿ), ‘ದಿನೇಶ್ ಕುಮಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು, ಅಕ್ರಮವಾಗಿ ನೂರಾರು ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ’ ಎಂದು ವಿವರಿಸಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಕಳೆದುಕೊಂಡ ಭೂಮಿಗೆ ಪರಿಹಾರಾತ್ಮಕವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದ ತನಿಖೆ ಆರಂಭಿಸಿದ್ದ ಇ.ಡಿಯು, 1,000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದನ್ನು ಪತ್ತೆ ಮಾಡಿತ್ತು.</p>.<p>ದಿನೇಶ್ ಅವರ ಸುಪರ್ದಿಯಲ್ಲೇ ಈ ಅಕ್ರಮಗಳೆಲ್ಲವೂ ನಡೆದಿವೆ. ನಿವೇಶನ ಹಂಚಿಕೆ ಮಾಡಿದ್ದಕ್ಕೆ ಪ್ರತಿಯಾಗಿ ದಿನೇಶ್ ಅವರು ಬಂಗಲೆ, ಕೃಷಿ ಜಮೀನು, ವಾಣಿಜ್ಯ ಸಂಕೀರ್ಣ, ಐಷಾರಾಮಿ ಕಾರುಗಳು ಮತ್ತು ಹಣವನ್ನು ಉಡುಗೊರೆಯಾಗಿ ಪಡೆದಿದ್ದರು. ಆ ಹಣದಿಂದ ಮತ್ತಷ್ಟು ಆಸ್ತಿಗಳನ್ನು ಖರೀದಿಸಿದ್ದರು ಎಂದು ಹೇಳಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿಯು ಈವರೆಗೆ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳ ಒಟ್ಟು ಮಾರುಕಟ್ಟೆ ಮೌಲ್ಯ ₹400 ಕೋಟಿಯಷ್ಟಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಪ್ರಕರಣದಲ್ಲಿ, ಮುಡಾದ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿರುವ ಜಾರಿ ನಿರ್ದೇಶನಾಲಯವು (ಇ.ಡಿ), ‘ದಿನೇಶ್ ಕುಮಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು, ಅಕ್ರಮವಾಗಿ ನೂರಾರು ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ’ ಎಂದು ವಿವರಿಸಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಕಳೆದುಕೊಂಡ ಭೂಮಿಗೆ ಪರಿಹಾರಾತ್ಮಕವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದ ತನಿಖೆ ಆರಂಭಿಸಿದ್ದ ಇ.ಡಿಯು, 1,000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದನ್ನು ಪತ್ತೆ ಮಾಡಿತ್ತು.</p>.<p>ದಿನೇಶ್ ಅವರ ಸುಪರ್ದಿಯಲ್ಲೇ ಈ ಅಕ್ರಮಗಳೆಲ್ಲವೂ ನಡೆದಿವೆ. ನಿವೇಶನ ಹಂಚಿಕೆ ಮಾಡಿದ್ದಕ್ಕೆ ಪ್ರತಿಯಾಗಿ ದಿನೇಶ್ ಅವರು ಬಂಗಲೆ, ಕೃಷಿ ಜಮೀನು, ವಾಣಿಜ್ಯ ಸಂಕೀರ್ಣ, ಐಷಾರಾಮಿ ಕಾರುಗಳು ಮತ್ತು ಹಣವನ್ನು ಉಡುಗೊರೆಯಾಗಿ ಪಡೆದಿದ್ದರು. ಆ ಹಣದಿಂದ ಮತ್ತಷ್ಟು ಆಸ್ತಿಗಳನ್ನು ಖರೀದಿಸಿದ್ದರು ಎಂದು ಹೇಳಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿಯು ಈವರೆಗೆ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳ ಒಟ್ಟು ಮಾರುಕಟ್ಟೆ ಮೌಲ್ಯ ₹400 ಕೋಟಿಯಷ್ಟಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>