<p><strong>ಬೆಂಗಳೂರು:</strong> 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ನಾವು ರಾಜಕೀಯ ಹೋರಾಟ ಮತ್ತು ಕಾನೂನು ಸಮರಕ್ಕೆ ಸಿದ್ದರಾಗಿದ್ದೇವೆ ' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಸಚಿವರ ಸಂಪುಟದ ಸಹೋದ್ಯೋಗಿಗಳ ಜೊತೆ ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ. ರಾಜ್ಯ ಸರ್ಕಾರವನ್ನು ಉರುಳಿಸುವ ನಡೆಸುವ ಹುನ್ನಾರದ ಭಾಗ' ಎಂದು ಆರೋಪಿಸಿದರು.</p><p>'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ನಾವೆಲ್ಲರೂ ಅವರ ಬೆನ್ನಿಗೆ ನಿಲ್ಲುತ್ತೇವೆ' ಎಂದೂ ಹೇಳಿದರು.</p><p>'ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜಕೀಯ ಷಡ್ಯಂತ್ರವಿದು. ಮುಖ್ಯಮಂತ್ರಿ ತಪ್ಪು ಮಾಡದಿದ್ದರೂ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ' ಎಂದೂ ದೂರಿದರು.</p><p>ಮುಖ್ಯಮಂತ್ರಿ ಮೇಲೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕಾನೂನು ಬಾಹಿರ ಎಂದು ಕೃಷ್ಣ ಬೈರೇಗೌಡ ಹೇಳಿದರು.</p><p>'ಇದು ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಧಾರ ಸರ್ಕಾರವನ್ನು ಬುಡಮೇಲು ಮಾಡಯವ ಯತ್ನ' ಎಂದು ಎಚ್. ಕೆ. ಪಾಟೀಲ ಹೇಳಿದರು.</p><p>ಸಚಿವರಾದ ಜಿ. ಪರಮೇಶ್ವರ, ಎಚ್. ಕೆ. ಪಾಟೀಲ, ಕೆ. ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ, ಕೃಷ್ಷ ಬೈರೇಗೌಡ ಸೇರಿದಂತೆ ಬಹುತೇಕ ಎಲ್ಲ ಸಚುವರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಇದ್ದರು.</p>.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ: ಹೋರಾಟಕ್ಕೆ ‘ಕೈ’ ನಿರ್ಧಾರ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ; ಕೇಂದ್ರದ ಕೈವಾಡ: ಪ್ರಿಯಾಂಕ್ ಖರ್ಗೆ.MUDA Scam | ಪಾರದರ್ಶಕ ತನಿಖೆಯಾಗಲಿ, ಸಿಎಂ ರಾಜೀನಾಮೆಗೆ ವಿಜಯೇಂದ್ರ ಆಗ್ರಹ.MUDA Scam|ಸಿಎಂ ವಿರುದ್ಧ ತನಿಖೆಗೆ ಅನುಮತಿ: ರಾಜ್ಯಪಾಲರ ಆದೇಶದಲ್ಲಿ ಹೇಳಿದ್ದೇನು?.MUDA Scam | ಪಾದಯಾತ್ರೆ, ಮೈತ್ರಿಪಕ್ಷಗಳ ಹೋರಾಟಕ್ಕೆ ಜಯ: ನಿಖಿಲ್ ಕುಮಾರಸ್ವಾಮಿ.MUDA Scam | ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಅನಿವಾರ್ಯ: ಸಂಸದ ಶೆಟ್ಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ನಾವು ರಾಜಕೀಯ ಹೋರಾಟ ಮತ್ತು ಕಾನೂನು ಸಮರಕ್ಕೆ ಸಿದ್ದರಾಗಿದ್ದೇವೆ ' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಸಚಿವರ ಸಂಪುಟದ ಸಹೋದ್ಯೋಗಿಗಳ ಜೊತೆ ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ. ರಾಜ್ಯ ಸರ್ಕಾರವನ್ನು ಉರುಳಿಸುವ ನಡೆಸುವ ಹುನ್ನಾರದ ಭಾಗ' ಎಂದು ಆರೋಪಿಸಿದರು.</p><p>'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ನಾವೆಲ್ಲರೂ ಅವರ ಬೆನ್ನಿಗೆ ನಿಲ್ಲುತ್ತೇವೆ' ಎಂದೂ ಹೇಳಿದರು.</p><p>'ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜಕೀಯ ಷಡ್ಯಂತ್ರವಿದು. ಮುಖ್ಯಮಂತ್ರಿ ತಪ್ಪು ಮಾಡದಿದ್ದರೂ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ' ಎಂದೂ ದೂರಿದರು.</p><p>ಮುಖ್ಯಮಂತ್ರಿ ಮೇಲೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕಾನೂನು ಬಾಹಿರ ಎಂದು ಕೃಷ್ಣ ಬೈರೇಗೌಡ ಹೇಳಿದರು.</p><p>'ಇದು ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಧಾರ ಸರ್ಕಾರವನ್ನು ಬುಡಮೇಲು ಮಾಡಯವ ಯತ್ನ' ಎಂದು ಎಚ್. ಕೆ. ಪಾಟೀಲ ಹೇಳಿದರು.</p><p>ಸಚಿವರಾದ ಜಿ. ಪರಮೇಶ್ವರ, ಎಚ್. ಕೆ. ಪಾಟೀಲ, ಕೆ. ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ, ಕೃಷ್ಷ ಬೈರೇಗೌಡ ಸೇರಿದಂತೆ ಬಹುತೇಕ ಎಲ್ಲ ಸಚುವರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಇದ್ದರು.</p>.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ: ಹೋರಾಟಕ್ಕೆ ‘ಕೈ’ ನಿರ್ಧಾರ.ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ; ಕೇಂದ್ರದ ಕೈವಾಡ: ಪ್ರಿಯಾಂಕ್ ಖರ್ಗೆ.MUDA Scam | ಪಾರದರ್ಶಕ ತನಿಖೆಯಾಗಲಿ, ಸಿಎಂ ರಾಜೀನಾಮೆಗೆ ವಿಜಯೇಂದ್ರ ಆಗ್ರಹ.MUDA Scam|ಸಿಎಂ ವಿರುದ್ಧ ತನಿಖೆಗೆ ಅನುಮತಿ: ರಾಜ್ಯಪಾಲರ ಆದೇಶದಲ್ಲಿ ಹೇಳಿದ್ದೇನು?.MUDA Scam | ಪಾದಯಾತ್ರೆ, ಮೈತ್ರಿಪಕ್ಷಗಳ ಹೋರಾಟಕ್ಕೆ ಜಯ: ನಿಖಿಲ್ ಕುಮಾರಸ್ವಾಮಿ.MUDA Scam | ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಅನಿವಾರ್ಯ: ಸಂಸದ ಶೆಟ್ಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>