<p><strong>ಬೆಂಗಳೂರು:</strong> ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎಲ್ಲ ಪಕ್ಷದವರ ಪಾಲೂ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಹೀಗೆ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ.</p>.<p>ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆಯಾದ ಶೋಭಾ ಅವರು ಈಚೆಗೆ ಮಾಧ್ಯಮಗೋಷ್ಠಿಯೊಂದರಲ್ಲಿ ಮಾತನಾಡಿದ್ದರು. ಗೋಷ್ಠಿ ಮುಗಿದ ಕಾರಣ ಅವರು ಕಾಫಿ ಸೇವಿಸುತ್ತಿದ್ದರು. ಆದರೆ ಸುದ್ದಿವಾಹಿನಿಯೊಂದರ ಕ್ಯಾಮೆರಾ ಇನ್ನೂ ಬಂದ್ ಆಗಿರಲಿಲ್ಲ.</p>.<p>ಆಗ ಬಿಜೆಪಿ ಕಾರ್ಯಕರ್ತರೊಬ್ಬರು, ‘ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶೋಭಾ, ‘ಅದರಲ್ಲಿ ಎಲ್ಲರಿಗೂ ಪಾಲು ಇದೆಯಪ್ಪಾ. ಎಲ್ಲ ಪಕ್ಷದವರೂ ಅದರಲ್ಲಿ ಇದ್ದಾರೆ’ ಎಂದರು. ಮತ್ತೆ ಮಾತು ಮುಂದುವರೆಸಲು ತಲೆಯೆತ್ತಿದ ಅವರು ಕ್ಯಾಮೆರಾದಲ್ಲಿ ಚಿತ್ರೀಕರಣ ಆಗುತ್ತಿರುವುದನ್ನು ಗಮನಿಸಿದರು. ತಕ್ಷಣವೇ, ‘ಮೀಡಿಯ ಇದೆ’ ಎಂದು ಕಾರ್ಯಕರ್ತರನ್ನು ಎಚ್ಚರಿಸಿದರು.</p>.<p>ಜತೆಗೆ ಕ್ಯಾಮೆರಾಮೆನ್ನನ್ನು, ‘ಏನಪ್ಪಾ ಕಾಫಿ ಕುಡಿಯುವುದನ್ನೂ ರೆಕಾರ್ಡ್ ಮಾಡುತ್ತಾರಾ’ ಎಂದು ಪ್ರಶ್ನಿಸಿದರು.</p>.<p>ಇವಿಷ್ಟೂ ದೃಶ್ಯಗಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಂಚಿಕೆಯಾಗಿದೆ. ಫೇಸ್ಬುಕ್ ಮತ್ತು ಎಕ್ಸ್ನಲ್ಲಿ ಈ ಸಂಬಂಧ ಪೋಸ್ಟ್ ಹಂಚಿಕೊಂಡಿರುವ ಹಲವರು, ‘ಮುಡಾ ಹಗರಣದಲ್ಲಿ ಎಲ್ಲರಿಗೂ ಪಾಲು ಇದೆ ಎಂಬುದನ್ನು ಬಿಜೆಪಿ ಸಚಿವರೇ ಒಪ್ಪಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ವಿರುದ್ಧ ಮಾತ್ರ ಆರೋಪ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.</p>.Muda Scam | ಪ್ರಾಸಿಕ್ಯೂಷನ್ಗೆ ಅನುಮತಿ: ಕಾನೂನು ತಜ್ಞರು ಏನಂತಾರೆ?.MUDA Scam|ಸಿಎಂ ವಿರುದ್ಧ ತನಿಖೆಗೆ ಅನುಮತಿ: ರಾಜ್ಯಪಾಲರ ಆದೇಶದಲ್ಲಿ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎಲ್ಲ ಪಕ್ಷದವರ ಪಾಲೂ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಹೀಗೆ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ.</p>.<p>ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆಯಾದ ಶೋಭಾ ಅವರು ಈಚೆಗೆ ಮಾಧ್ಯಮಗೋಷ್ಠಿಯೊಂದರಲ್ಲಿ ಮಾತನಾಡಿದ್ದರು. ಗೋಷ್ಠಿ ಮುಗಿದ ಕಾರಣ ಅವರು ಕಾಫಿ ಸೇವಿಸುತ್ತಿದ್ದರು. ಆದರೆ ಸುದ್ದಿವಾಹಿನಿಯೊಂದರ ಕ್ಯಾಮೆರಾ ಇನ್ನೂ ಬಂದ್ ಆಗಿರಲಿಲ್ಲ.</p>.<p>ಆಗ ಬಿಜೆಪಿ ಕಾರ್ಯಕರ್ತರೊಬ್ಬರು, ‘ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶೋಭಾ, ‘ಅದರಲ್ಲಿ ಎಲ್ಲರಿಗೂ ಪಾಲು ಇದೆಯಪ್ಪಾ. ಎಲ್ಲ ಪಕ್ಷದವರೂ ಅದರಲ್ಲಿ ಇದ್ದಾರೆ’ ಎಂದರು. ಮತ್ತೆ ಮಾತು ಮುಂದುವರೆಸಲು ತಲೆಯೆತ್ತಿದ ಅವರು ಕ್ಯಾಮೆರಾದಲ್ಲಿ ಚಿತ್ರೀಕರಣ ಆಗುತ್ತಿರುವುದನ್ನು ಗಮನಿಸಿದರು. ತಕ್ಷಣವೇ, ‘ಮೀಡಿಯ ಇದೆ’ ಎಂದು ಕಾರ್ಯಕರ್ತರನ್ನು ಎಚ್ಚರಿಸಿದರು.</p>.<p>ಜತೆಗೆ ಕ್ಯಾಮೆರಾಮೆನ್ನನ್ನು, ‘ಏನಪ್ಪಾ ಕಾಫಿ ಕುಡಿಯುವುದನ್ನೂ ರೆಕಾರ್ಡ್ ಮಾಡುತ್ತಾರಾ’ ಎಂದು ಪ್ರಶ್ನಿಸಿದರು.</p>.<p>ಇವಿಷ್ಟೂ ದೃಶ್ಯಗಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಂಚಿಕೆಯಾಗಿದೆ. ಫೇಸ್ಬುಕ್ ಮತ್ತು ಎಕ್ಸ್ನಲ್ಲಿ ಈ ಸಂಬಂಧ ಪೋಸ್ಟ್ ಹಂಚಿಕೊಂಡಿರುವ ಹಲವರು, ‘ಮುಡಾ ಹಗರಣದಲ್ಲಿ ಎಲ್ಲರಿಗೂ ಪಾಲು ಇದೆ ಎಂಬುದನ್ನು ಬಿಜೆಪಿ ಸಚಿವರೇ ಒಪ್ಪಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ವಿರುದ್ಧ ಮಾತ್ರ ಆರೋಪ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.</p>.Muda Scam | ಪ್ರಾಸಿಕ್ಯೂಷನ್ಗೆ ಅನುಮತಿ: ಕಾನೂನು ತಜ್ಞರು ಏನಂತಾರೆ?.MUDA Scam|ಸಿಎಂ ವಿರುದ್ಧ ತನಿಖೆಗೆ ಅನುಮತಿ: ರಾಜ್ಯಪಾಲರ ಆದೇಶದಲ್ಲಿ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>