<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕವು ಪಂಜಿನ ಮೆರವಣಿಗೆಗೆ ಕರೆ ನೀಡಿದೆ.</p><p>ಬೆಂಗಳೂರಿನ ಗಾಂಧಿನಗರದ ಮೌರ್ಯ ವೃತ್ತದಲ್ಲಿ ಬುಧವಾರ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆ ಆರಂಭವಾಗಲಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಹೊರಜಿಲ್ಲೆಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಒಕ್ಕೂಟ ಹೇಳಿದೆ.</p><p>‘ರಾಜ್ಯದಲ್ಲಿನ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ಕುಣಿದರೆ, ‘ಗೋ ಬ್ಯಾಕ್ ಗವರ್ನರ್’ ಚಳವಳಿ ಆರಂಭಿಸಬೇಕಾಗುತ್ತದೆ’ ಎಂದು ಬೆಂಗಳೂರು ವಿ.ವಿ. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಹೇಳಿದರು.</p>.<p><strong>27ಕ್ಕೆ ರಾಜಭವನ ಚಲೋ</strong></p><p>‘ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಇದಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಇದನ್ನು ಖಂಡಿಸಿ ಇದೇ 27ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.</p><p>ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ‘ಜಾತ್ಯತೀತರು ಎಂದು ಹೇಳಿಕೊಳ್ಳುವ ಆದರೆ, ಕಡು ಜಾತಿವಾದಿಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡರು ದೆಹಲಿಗೆ ಹೋಗಿ, ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.ಹೊಟ್ಟೆ ಉರಿಯಿಂದ BJP–JDSನವರು ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ:ಸಿದ್ದರಾಮಯ್ಯ.ರಾಜ್ಯಪಾಲರನ್ನು ಅವಾಚ್ಯವಾಗಿ ನಿಂದಿಸಿದ ಸಚಿವರ ಮೇಲೆ ಕೇಸ್ ದಾಖಲಿಸಬೇಕು: ಕಾರಜೋಳ.ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಚಿವರು.ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿ.ಕೆ.ಶಿವಕುಮಾರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕವು ಪಂಜಿನ ಮೆರವಣಿಗೆಗೆ ಕರೆ ನೀಡಿದೆ.</p><p>ಬೆಂಗಳೂರಿನ ಗಾಂಧಿನಗರದ ಮೌರ್ಯ ವೃತ್ತದಲ್ಲಿ ಬುಧವಾರ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆ ಆರಂಭವಾಗಲಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಹೊರಜಿಲ್ಲೆಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಒಕ್ಕೂಟ ಹೇಳಿದೆ.</p><p>‘ರಾಜ್ಯದಲ್ಲಿನ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ಕುಣಿದರೆ, ‘ಗೋ ಬ್ಯಾಕ್ ಗವರ್ನರ್’ ಚಳವಳಿ ಆರಂಭಿಸಬೇಕಾಗುತ್ತದೆ’ ಎಂದು ಬೆಂಗಳೂರು ವಿ.ವಿ. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಹೇಳಿದರು.</p>.<p><strong>27ಕ್ಕೆ ರಾಜಭವನ ಚಲೋ</strong></p><p>‘ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಇದಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಇದನ್ನು ಖಂಡಿಸಿ ಇದೇ 27ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.</p><p>ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ‘ಜಾತ್ಯತೀತರು ಎಂದು ಹೇಳಿಕೊಳ್ಳುವ ಆದರೆ, ಕಡು ಜಾತಿವಾದಿಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡರು ದೆಹಲಿಗೆ ಹೋಗಿ, ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.ಹೊಟ್ಟೆ ಉರಿಯಿಂದ BJP–JDSನವರು ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ:ಸಿದ್ದರಾಮಯ್ಯ.ರಾಜ್ಯಪಾಲರನ್ನು ಅವಾಚ್ಯವಾಗಿ ನಿಂದಿಸಿದ ಸಚಿವರ ಮೇಲೆ ಕೇಸ್ ದಾಖಲಿಸಬೇಕು: ಕಾರಜೋಳ.ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಚಿವರು.ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿ.ಕೆ.ಶಿವಕುಮಾರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>