<p><strong>ಬೆಂಗಳೂರು</strong>: ಮುಡಾ ನಿವೇಶನ ಹಗರಣ ಖಂಡಿಸಿ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಆರಂಭಿಸಿದ ಪಾದಯಾತ್ರೆ ಪರಿಣಾಮ ಮೈಸೂರು ರಸ್ತೆಯಲ್ಲಿ ಶನಿವಾರ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಹಾಗೂ ಚಾಲಕರು ಹೈರಾಣಾದರು.</p>.<p>ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಚಾರ ದಟ್ಟಣೆಯಿಂದ ಸಮಸ್ಯೆ ಉಂಟಾಗಿತ್ತು. ನಗರದ ವಿವಿಧ ಜಂಕ್ಷನ್ಗಳಲ್ಲಿ ವಾಹನ ಸವಾರರು ಕಾದುಕಾದು ಬಸವಳಿದರು.</p>.<p>ಕೆಂಗೇರಿಯ ನೈಸ್ ರಸ್ತೆಯ ಕೆಂಪಮ್ಮ ದೇವಸ್ಥಾನ ಬಳಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರು ರಸ್ತೆಯ ಮೂಲಕವೇ ಕಾರು, ಬಸ್ಗಳಲ್ಲಿ ಕಾರ್ಯಕರ್ತರು ದೇವಸ್ಥಾನದ ಬಳಿಗೆ ತೆರಳಿದರು. ಇದರಿಂದ ಮೈಸೂರು ರಸ್ತೆಯ ಹಲವು ಜಂಕ್ಷನ್ಗಳಲ್ಲಿ ದಟ್ಟಣೆ ಉಂಟಾಗಿತ್ತು.</p>.<p>ಜ್ಞಾನಭಾರತಿ ಜಂಕ್ಷನ್, ಆರ್.ವಿ.ಕಾಲೇಜು ಬಳಿ, ಕೆಂಗೇರಿ, ನೈಸ್ ರೋಡ್ ಜಂಕ್ಷನ್, ಹೆಜ್ಜಾಲ ಹಾಗೂ ಎಕ್ಸ್ಪ್ರೆಸ್ ವೇನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲವು ಜಂಕ್ಷನ್ಗಳಲ್ಲಿ ಆಂಬುಲೆನ್ಸ್ಗಳು ಸಿಲುಕಿ ರೋಗಿಗಳು ಪರದಾಡಿದರು. </p>.<p>ಇನ್ನು, ಮೈಸೂರಿನತ್ತ ಹೊರಟಿದ್ದವರೂ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಡಾ ನಿವೇಶನ ಹಗರಣ ಖಂಡಿಸಿ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಆರಂಭಿಸಿದ ಪಾದಯಾತ್ರೆ ಪರಿಣಾಮ ಮೈಸೂರು ರಸ್ತೆಯಲ್ಲಿ ಶನಿವಾರ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಹಾಗೂ ಚಾಲಕರು ಹೈರಾಣಾದರು.</p>.<p>ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಚಾರ ದಟ್ಟಣೆಯಿಂದ ಸಮಸ್ಯೆ ಉಂಟಾಗಿತ್ತು. ನಗರದ ವಿವಿಧ ಜಂಕ್ಷನ್ಗಳಲ್ಲಿ ವಾಹನ ಸವಾರರು ಕಾದುಕಾದು ಬಸವಳಿದರು.</p>.<p>ಕೆಂಗೇರಿಯ ನೈಸ್ ರಸ್ತೆಯ ಕೆಂಪಮ್ಮ ದೇವಸ್ಥಾನ ಬಳಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರು ರಸ್ತೆಯ ಮೂಲಕವೇ ಕಾರು, ಬಸ್ಗಳಲ್ಲಿ ಕಾರ್ಯಕರ್ತರು ದೇವಸ್ಥಾನದ ಬಳಿಗೆ ತೆರಳಿದರು. ಇದರಿಂದ ಮೈಸೂರು ರಸ್ತೆಯ ಹಲವು ಜಂಕ್ಷನ್ಗಳಲ್ಲಿ ದಟ್ಟಣೆ ಉಂಟಾಗಿತ್ತು.</p>.<p>ಜ್ಞಾನಭಾರತಿ ಜಂಕ್ಷನ್, ಆರ್.ವಿ.ಕಾಲೇಜು ಬಳಿ, ಕೆಂಗೇರಿ, ನೈಸ್ ರೋಡ್ ಜಂಕ್ಷನ್, ಹೆಜ್ಜಾಲ ಹಾಗೂ ಎಕ್ಸ್ಪ್ರೆಸ್ ವೇನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲವು ಜಂಕ್ಷನ್ಗಳಲ್ಲಿ ಆಂಬುಲೆನ್ಸ್ಗಳು ಸಿಲುಕಿ ರೋಗಿಗಳು ಪರದಾಡಿದರು. </p>.<p>ಇನ್ನು, ಮೈಸೂರಿನತ್ತ ಹೊರಟಿದ್ದವರೂ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>