ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಮುಡಾ ಹಗರಣ: ಸಿ.ಎಂ ವಿರುದ್ಧದ ದೂರುಗಳಲ್ಲಿ ಏನಿದೆ?

Published : 17 ಆಗಸ್ಟ್ 2024, 23:35 IST
Last Updated : 17 ಆಗಸ್ಟ್ 2024, 23:35 IST
ಫಾಲೋ ಮಾಡಿ
Comments
‘ಸತ್ತ ವ್ಯಕ್ತಿ ಹೆಸರಿನಲ್ಲಿ ಡಿನೋಟಿಫೈ’
ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಅವರ ಕೋರಿಕೆಯಾಗಿತ್ತು. ಮೃತ ನಿಂಗ ಉರುಫ್‌ ಜವರನ ಹೆಸರಿನಲ್ಲಿ ಡಿನೋಟಿಫೈ ಮಾಡಲಾಗಿದೆ. ಅದಾಗಲೇ ನಿವೇಶನ ಹಂಚಿಕೆ ಮಾಡಲಾಗಿದ್ದ ಜಮೀನು ತಮ್ಮದು ಎಂದು ತೋರಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ನಿಂಗ ಉರುಫ್‌ ಜವರನ ಕುಟುಂಬದ ಎಲ್ಲ ಸದಸ್ಯರನ್ನು ಮುಚ್ಚಿಟ್ಟು, ಒಬ್ಬರ ಹೆಸರಿನಲ್ಲಿ ಆಸ್ತಿ ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ಕೃಷ್ಣ ಅವರ ಆರೋಪ.
‘ಎಫ್ಐಆರ್‌ಗೆ ಅನುಮತಿ ನೀಡಿ’
ಅಕ್ರಮ ಎಸಗುವ ಮೂಲಕ ಸಿದ್ದರಾಮಯ್ಯ ಅವರು ತಮ್ಮ ಸಂಪತ್ತನ್ನು ವೃದ್ಧಿಪಡಿಸಿಕೊಂಡಿದ್ದಾರೆ. ಅಕ್ರಮಕ್ಕೆ ಸಂಬಂಧಿ ಸಿದ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ತಮ್ಮ ಆಪ್ತ ಮರೀಗೌಡ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ತಕ್ಷಣವೇ ಎಫ್‌ಐಆರ್‌ ದಾಖಲಿಸಬೇಕು. ಇದಕ್ಕಾಗಿ ಅನುಮತಿ ನೀಡಬೇಕು ಎಂಬುದು ಮತ್ತೊಬ್ಬ ಖಾಸಗಿ ದೂರುದಾರ ಪ್ರದೀಪ್‌ ಕುಮಾರ್‌ ಎಸ್‌.ಪಿ. ಅವರ ಕೋರಿಕೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT