<p><strong>ಬೆಂಗಳೂರು</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು ಸಕ್ಷಮ ನ್ಯಾಯಾಲಯಕ್ಕೆ ಬಿ ಅಂತಿಮ ವರದಿ ಸಲ್ಲಿಸಿರುವುದನ್ನು ವಿರೋಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.</p>.<p>ಈ ಕುರಿತ ಅರ್ಜಿಯನ್ನು ಇ.ಡಿ ಪರ ವಕೀಲ ಮಧುಕರ ಎಂ.ದೇಶಪಾಂಡೆ ಅವರು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಸಲ್ಲಿಸಿದರು.</p>.<p>ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ‘ಪ್ರಕರಣದಲ್ಲಿ ಆರೋಪವು ಅನುಸೂಚಿತ ಅಪರಾಧ ಅಲ್ಲ ಎಂದು ಲೋಕಾಯುಕ್ತ ಬಿ ಅಂತಿಮ ವರದಿ ಸಲ್ಲಿಸಿದೆ. ದೂರುದಾರರು ಈಗಾಗಲೇ ಈ ವರದಿ ವಿರೋಧಿಸಿ ಅರ್ಜಿ ಸಲ್ಲಿಸಿದ್ದು, ಇ.ಡಿ ಕೂಡಾ ಇಂತಹುದೇ ವಿರೋಧದ ಅರ್ಜಿಯನ್ನು ಸಲ್ಲಿಸುವುದಕ್ಕೆ ಹೊಂದಿರುವ ನ್ಯಾಯಯುತ ಅಧಿಕಾರ ಏನು ಮತ್ತು ಇದನ್ನು ವಿಚಾರಣೆಗೆ ಸ್ವೀಕಾರಾರ್ಹ ಎಂದು ಪರಿಗಣಿಸುವುದು ಎಷ್ಟು ಸೂಕ್ತ ?, ಒಂದು ವೇಳೆ ಈ ನ್ಯಾಯಾಲಯ ಬಿ ಅಂತಿಮ ವರದಿಯನ್ನು ಒಪ್ಪಿಕೊಂಡರೆ ಏನು ಮಾಡುತ್ತೀರಿ’ ಎಂದು ದೇಶಪಾಂಡೆ ಅವರನ್ನು ಪ್ರಶ್ನಿಸಿತು.</p>.<p>ಇದಕ್ಕೆ ದೇಶಪಾಂಡೆ, ‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ–2002ರ (ಪಿಎಂಎಲ್ಎ) ಕಲಂ 66 (2)ರ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಲೋಕಾಯುಕ್ತ ತನಿಖಾಧಿಕಾರಿಗಳ ಜೊತೆ ಹಂಚಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇ.ಡಿ ತನ್ನ ತನಿಖೆ ಮುಂದುವರಿಸಬಹುದು ಎಂದು ಹೈಕೋರ್ಟ್ ಹೇಳಿದೆ. ಹೀಗಾಗಿ, ನ್ಯಾಯಾಲಯ ಅರ್ಜಿಯನ್ನು ಪರಿಗಣಿಸಬಹುದು ಅಥವಾ ಪರಿಗಣಿಸದೆಯೇ ವಜಾಗೊಳಿಸಬಹುದು. ಒಂದು ವೇಳೆ ನಮ್ಮ ವಿರೋಧದ ಅರ್ಜಿಯನ್ನು ವಜಾ ಮಾಡಿದರೆ ಆ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡುತ್ತೇವೆ’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ಇ.ಡಿ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಜೊತೆ ತನಿಖೆಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆಯೇ ಹೇಗೆ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಲೋಕಾಯುಕ್ತ ಪರ ವಕೀಲ ವೆಂಕಟೇಶ ಅರಬಟ್ಟಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 8ಕ್ಕೆ ಮುಂದೂಡಿದರು. ದೂರುದಾರ ಸ್ನೇಹಮಯಿ ಕೃಷ್ಣ ಹಾಜರಿದ್ದರು.</p>.<h2>ಪ್ರಜ್ವಲ್ ರೇವಣ್ಣ ಬಿಡುಗಡೆ ಕೋರಿಕೆ ಅರ್ಜಿ ತಿರಸ್ಕೃತ</h2>.<p>‘ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.</p>.<p>ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಗುರುವಾರ ಪ್ರಕಟಿಸಿದರು.</p>.<p>‘ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ನ್ಯಾಯಾಧೀಶರು ದೋಷಾರೋಪ ನಿಗದಿಗೊಳಿಸಿರುವುದನ್ನು ಓದಿ ಹೇಳಿದರು. ಈ ಆದೇಶ ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ದುಃಖಭರಿತರಾದರು. ವಿಚಾರಣೆಯನ್ನು ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು ಸಕ್ಷಮ ನ್ಯಾಯಾಲಯಕ್ಕೆ ಬಿ ಅಂತಿಮ ವರದಿ ಸಲ್ಲಿಸಿರುವುದನ್ನು ವಿರೋಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.</p>.<p>ಈ ಕುರಿತ ಅರ್ಜಿಯನ್ನು ಇ.ಡಿ ಪರ ವಕೀಲ ಮಧುಕರ ಎಂ.ದೇಶಪಾಂಡೆ ಅವರು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಸಲ್ಲಿಸಿದರು.</p>.<p>ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ‘ಪ್ರಕರಣದಲ್ಲಿ ಆರೋಪವು ಅನುಸೂಚಿತ ಅಪರಾಧ ಅಲ್ಲ ಎಂದು ಲೋಕಾಯುಕ್ತ ಬಿ ಅಂತಿಮ ವರದಿ ಸಲ್ಲಿಸಿದೆ. ದೂರುದಾರರು ಈಗಾಗಲೇ ಈ ವರದಿ ವಿರೋಧಿಸಿ ಅರ್ಜಿ ಸಲ್ಲಿಸಿದ್ದು, ಇ.ಡಿ ಕೂಡಾ ಇಂತಹುದೇ ವಿರೋಧದ ಅರ್ಜಿಯನ್ನು ಸಲ್ಲಿಸುವುದಕ್ಕೆ ಹೊಂದಿರುವ ನ್ಯಾಯಯುತ ಅಧಿಕಾರ ಏನು ಮತ್ತು ಇದನ್ನು ವಿಚಾರಣೆಗೆ ಸ್ವೀಕಾರಾರ್ಹ ಎಂದು ಪರಿಗಣಿಸುವುದು ಎಷ್ಟು ಸೂಕ್ತ ?, ಒಂದು ವೇಳೆ ಈ ನ್ಯಾಯಾಲಯ ಬಿ ಅಂತಿಮ ವರದಿಯನ್ನು ಒಪ್ಪಿಕೊಂಡರೆ ಏನು ಮಾಡುತ್ತೀರಿ’ ಎಂದು ದೇಶಪಾಂಡೆ ಅವರನ್ನು ಪ್ರಶ್ನಿಸಿತು.</p>.<p>ಇದಕ್ಕೆ ದೇಶಪಾಂಡೆ, ‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ–2002ರ (ಪಿಎಂಎಲ್ಎ) ಕಲಂ 66 (2)ರ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಲೋಕಾಯುಕ್ತ ತನಿಖಾಧಿಕಾರಿಗಳ ಜೊತೆ ಹಂಚಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇ.ಡಿ ತನ್ನ ತನಿಖೆ ಮುಂದುವರಿಸಬಹುದು ಎಂದು ಹೈಕೋರ್ಟ್ ಹೇಳಿದೆ. ಹೀಗಾಗಿ, ನ್ಯಾಯಾಲಯ ಅರ್ಜಿಯನ್ನು ಪರಿಗಣಿಸಬಹುದು ಅಥವಾ ಪರಿಗಣಿಸದೆಯೇ ವಜಾಗೊಳಿಸಬಹುದು. ಒಂದು ವೇಳೆ ನಮ್ಮ ವಿರೋಧದ ಅರ್ಜಿಯನ್ನು ವಜಾ ಮಾಡಿದರೆ ಆ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡುತ್ತೇವೆ’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ಇ.ಡಿ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಜೊತೆ ತನಿಖೆಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆಯೇ ಹೇಗೆ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಲೋಕಾಯುಕ್ತ ಪರ ವಕೀಲ ವೆಂಕಟೇಶ ಅರಬಟ್ಟಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 8ಕ್ಕೆ ಮುಂದೂಡಿದರು. ದೂರುದಾರ ಸ್ನೇಹಮಯಿ ಕೃಷ್ಣ ಹಾಜರಿದ್ದರು.</p>.<h2>ಪ್ರಜ್ವಲ್ ರೇವಣ್ಣ ಬಿಡುಗಡೆ ಕೋರಿಕೆ ಅರ್ಜಿ ತಿರಸ್ಕೃತ</h2>.<p>‘ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.</p>.<p>ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಗುರುವಾರ ಪ್ರಕಟಿಸಿದರು.</p>.<p>‘ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ನ್ಯಾಯಾಧೀಶರು ದೋಷಾರೋಪ ನಿಗದಿಗೊಳಿಸಿರುವುದನ್ನು ಓದಿ ಹೇಳಿದರು. ಈ ಆದೇಶ ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ದುಃಖಭರಿತರಾದರು. ವಿಚಾರಣೆಯನ್ನು ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>