‘ಸದ್ಯವೇ ಮಂತ್ರಿ ಮಂಡಲ ವಿಸ್ತರಣೆ ಆಗಲಿದೆ. ನನಗೆ ಸಚಿವ ಸ್ಥಾನ ಸಿಗುವುದನ್ನು ತಪ್ಪಿಸಲು ಕಾಣದ ಕೈಗಳು ನಿಮ್ಮ (ಮೋಟಮ್ಮ) ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ. ಯಾರದ್ದೋ ಮಾತು ಕೇಳಿ ನನ್ನ ವಿರುದ್ಧ ಹೇಳಿಕೆಗಳನ್ನು ಕೊಡುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನಿಜವಾದ ನಾಯಕಿಯಾಗಿದ್ದರೆ, ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಪ್ರಯತ್ನ ಮಾಡಿ, ಆಗ ನಿಮಗೆ ತಕ್ಕ ಉತ್ತರ ನೀಡುತ್ತೇನೆ’ ಎಂದೂ ಹೇಳಿದರು.