ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಮಾತನಾಡಿ, ‘ವಿಶ್ವಮಾನವ ಸಂದೇಶ ಸಾರಿದ ಬುದ್ಧ, ಬಸವ, ಕನಕ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳು ಒಂದು ಪ್ರಾಂತ್ಯ, ಭಾಷೆ, ದೇಶಗಳಿಗೆ ಸೀಮಿತವಾಗದೆ ಜಾಗತಿಕ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅನುಸಂಧಾನ ಆಗುವ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.