<p><strong>ಬೆಂಗಳೂರು:</strong> ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲಿ ಉಮೇದುವಾರಿಕೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳ ಶುಲ್ಕವನ್ನು ಕೆಪಿಸಿಸಿ ₹25,000ಕ್ಕೆ ಇಳಿಸಿದೆ.</p>.<p>ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಬಗ್ಗೆ ಘೋಷಣೆ ಮಾಡಿದರು. </p>.<p>ಪಾಲಿಕೆ ಚುನಾವಣೆಗೆ ಮಾಡಿಕೊಳ್ಳಬೇಕಾದ ಸಿದ್ಧತೆ ಬಗ್ಗೆ ಮಾತನಾಡುವಾಗ ಅವರು ಅರ್ಜಿ ಶುಲ್ಕದ ವಿಚಾರವನ್ನು ಪ್ರಸ್ತಾಪಿಸಿದರು. ‘ಸಾಮಾನ್ಯ ಅಭ್ಯರ್ಥಿಗಳಿಗೆ ₹50,000, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ₹25,000 ಅರ್ಜಿ ಶುಲ್ಕ ನಿಗದಿ ಮಾಡಿದ್ದೇವೆ’ ಎಂದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಲವರು, ‘ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ರಿಯಾಯಿತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಆಗ ಶಿವಕುಮಾರ್ ಅವರು, ‘ಈಗಾಗಲೇ ಮಹಿಳೆಯರಿಗೆ ತಿಂಗಳಿಗೆ ₹2,000, ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕದಲ್ಲಿ ರಿಯಾಯಿತಿ ನೀಡಲು ಸಾಧ್ಯವಿಲ್ಲ’ ಎಂದರು.</p>.<p>ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು, ಮಹಿಳಾ ಅಭ್ಯರ್ಥಿಗಳಿಗೆ ರಿಯಾಯಿತಿ ನೀಡಿ ಎಂದರು.</p>.<p>ಅದಕ್ಕೆ ಒಪ್ಪಿದ ಶಿವಕುಮಾರ್, ‘ಮುಖ್ಯಮಂತ್ರಿ ಮತ್ತು ಸಚಿವ ಜಾರ್ಜ್ ಅವರು ಹೇಳುತ್ತಿದ್ದಾರೆ ಎಂದು ಅರ್ಜಿ ಶುಲ್ಕವನ್ನು ₹25,000ಕ್ಕೆ ಇಳಿಸುತ್ತಿದ್ದೇನೆ. ಪಾಲಿಕೆಗಳ 369 ವಾರ್ಡ್ಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಲಾಗಿದೆ. ಒಂದೊಂದು ಕ್ಷೇತ್ರದಿಂದಲೂ ಕನಿಷ್ಠ 10 ಮಹಿಳೆಯರು ಉಮೇದುವಾರಿಕೆಗೆ ಅರ್ಜಿ ಸಲ್ಲಿಸಬೇಕು. ಚೆನ್ನಾಗಿ ಕೆಲಸ ಮಾಡಿರುವವರಿಗೆ ಪ್ರಾಮುಖ್ಯನೀಡಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲಿ ಉಮೇದುವಾರಿಕೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳ ಶುಲ್ಕವನ್ನು ಕೆಪಿಸಿಸಿ ₹25,000ಕ್ಕೆ ಇಳಿಸಿದೆ.</p>.<p>ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಬಗ್ಗೆ ಘೋಷಣೆ ಮಾಡಿದರು. </p>.<p>ಪಾಲಿಕೆ ಚುನಾವಣೆಗೆ ಮಾಡಿಕೊಳ್ಳಬೇಕಾದ ಸಿದ್ಧತೆ ಬಗ್ಗೆ ಮಾತನಾಡುವಾಗ ಅವರು ಅರ್ಜಿ ಶುಲ್ಕದ ವಿಚಾರವನ್ನು ಪ್ರಸ್ತಾಪಿಸಿದರು. ‘ಸಾಮಾನ್ಯ ಅಭ್ಯರ್ಥಿಗಳಿಗೆ ₹50,000, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ₹25,000 ಅರ್ಜಿ ಶುಲ್ಕ ನಿಗದಿ ಮಾಡಿದ್ದೇವೆ’ ಎಂದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಲವರು, ‘ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ರಿಯಾಯಿತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಆಗ ಶಿವಕುಮಾರ್ ಅವರು, ‘ಈಗಾಗಲೇ ಮಹಿಳೆಯರಿಗೆ ತಿಂಗಳಿಗೆ ₹2,000, ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕದಲ್ಲಿ ರಿಯಾಯಿತಿ ನೀಡಲು ಸಾಧ್ಯವಿಲ್ಲ’ ಎಂದರು.</p>.<p>ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು, ಮಹಿಳಾ ಅಭ್ಯರ್ಥಿಗಳಿಗೆ ರಿಯಾಯಿತಿ ನೀಡಿ ಎಂದರು.</p>.<p>ಅದಕ್ಕೆ ಒಪ್ಪಿದ ಶಿವಕುಮಾರ್, ‘ಮುಖ್ಯಮಂತ್ರಿ ಮತ್ತು ಸಚಿವ ಜಾರ್ಜ್ ಅವರು ಹೇಳುತ್ತಿದ್ದಾರೆ ಎಂದು ಅರ್ಜಿ ಶುಲ್ಕವನ್ನು ₹25,000ಕ್ಕೆ ಇಳಿಸುತ್ತಿದ್ದೇನೆ. ಪಾಲಿಕೆಗಳ 369 ವಾರ್ಡ್ಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಲಾಗಿದೆ. ಒಂದೊಂದು ಕ್ಷೇತ್ರದಿಂದಲೂ ಕನಿಷ್ಠ 10 ಮಹಿಳೆಯರು ಉಮೇದುವಾರಿಕೆಗೆ ಅರ್ಜಿ ಸಲ್ಲಿಸಬೇಕು. ಚೆನ್ನಾಗಿ ಕೆಲಸ ಮಾಡಿರುವವರಿಗೆ ಪ್ರಾಮುಖ್ಯನೀಡಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>