<p><strong>ಬೆಂಗಳೂರು:</strong> ‘ಬೆಟ್ಟ ಹಲಸೂರು ಮೆಟ್ರೊ ನಿಲ್ದಾಣ ನಿರ್ಮಾಣಕ್ಕೆ ಮುನಿರತ್ನ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಆ್ಯಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಟುಕಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಮುನಿರತ್ನ, ‘ಬೆಟ್ಟ ಹಲಸೂರು ಮೆಟ್ರೊ ನಿಲ್ದಾಣ ನಿರ್ಮಾಣಕ್ಕೆ ಎಂಬೆಸಿ ಸಂಸ್ಥೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಆ ನಿಲ್ದಾಣ ನಿರ್ಮಾಣ ಕೈಬಿಟ್ಟಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>ಅದಕ್ಕೆ ಉತ್ತರಿಸಿದ ಶಿವಕುಮಾರ್, 'ಸಿಎಸ್ಆರ್ ನಿಧಿಯಿಂದ ಮೆಟ್ರೊ ನಿಲ್ದಾಣ ನಿರ್ಮಿಸಿದರೆ ಆ ನಿಲ್ದಾಣಕ್ಕೆ ನಿಧಿ ನೀಡಿದ ಕಂಪನಿಯ ಹೆಸರಿಡಲು ಅವಕಾಶ ಮಾಡಿಕೊಡುತ್ತೇವೆ. ಈ ಮಾದರಿಗೆ ಪ್ರಧಾನಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುನಿರತ್ನ ಅವರಿಗೆ ಸೇರಿದ 70-80 ಎಕರೆ ಜಮೀನು ಬೆಟ್ಟ ಹಲಸೂರು ನಿಲ್ದಾಣದ ಸಮೀಪವಿದೆ. ಅದಕ್ಕೆ ಅವರು ಈ ಪ್ರಶ್ನೆ ಎತ್ತಿದ್ದಾರೆ’ ಎಂದರು.</p>.<p>ಮಧ್ಯಪ್ರವೇಶಿಸಿದ ಮುನಿರತ್ನ, 'ಶಿವಕುಮಾರ್ ಅವರು ಬಿಲ್ಡರ್ಗೆ ಕರೆ ಮಾಡಿ ಹಣ ಕಟ್ಟುತ್ತೀಯಾ ಇಲ್ಲವಾ ಎಂದು ಕೇಳಿದ 24 ತಾಸಿನಲ್ಲಿ ಎಂಬೆಸಿ ಬಿಲ್ಡರ್ನವರು ಹಣ ಕಟ್ಟುತ್ತಾರೆ. ಶಿವಕುಮಾರ್ ಅವರ ಮಾತನ್ನಷ್ಟೇ ಬಿಲ್ಡರ್ಗಳು ಕೇಳುತ್ತಾರೆ’ ಎಂದರು.</p>.<p>ಅದಕ್ಕೆ ಶಿವಕುಮಾರ್, ‘ಆ ಭಾಗದಲ್ಲಿ ಎಂಬೆಸಿ ಅವರದ್ದು ಸುಮಾರು 250 ಎಕರೆ ಜಮೀನಿದೆ. ಅವರು ಮೆಟ್ರೊ ನಿಲ್ದಾಣಕ್ಕೆ ತಮ್ಮ ಹೆಸರು ಬರಬೇಕೆಂದು ಒಪ್ಪಂದ ಮಾಡಿಕೊಂಡಿದ್ದಾರೆ. ₹ 140 ಕೋಟಿ ಮೊತ್ತದಲ್ಲಿ ನಿರ್ಮಿಸಲಾಗುವ ಮೆಟ್ರೊ ನಿಲ್ದಾಣಕ್ಕೆ ₹ 120 ಕೋಟಿ ನೀಡುವುದಾಗಿ ಹೇಳಿದ್ದರು. ಅದರಲ್ಲಿ ಕೇವಲ ₹ 1 ಕೋಟಿ ನೀಡಿದ್ದಾರೆ’ ಎಂದರು.</p>.<p>ಆಗ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಎಂಬೆಸಿಯವರು ಬಾಕಿ ₹ 119 ಕೋಟಿ ನೀಡಲಿ ಎಂದು ಉಪಮುಖ್ಯಮಂತ್ರಿ ಅವರು ಧಮ್ಕಿ ಹಾಕಲಿ ಎಂದಷ್ಟೇ ಮುನಿರತ್ನ ಹೇಳುತ್ತಿದ್ದಾರೆ’ ಎಂದರು.</p>.<p>ಅದಕ್ಕೆ ಶಿವಕುಮಾರ್, ‘ನಾನೇಕೆ ಧಮ್ಕಿ ಹಾಕಲಿ? ಬೇಕಾದರೆ ಒಪ್ಪಂದ ರದ್ದು ಮಾಡೋಣ. ಮುನಿರತ್ನ ಹಣ ಕೊಟ್ಟರೆ ‘ಮುನಿರತ್ನ ಆ್ಯಂಡ್ ಕಂಪನಿ’ ಎಂದೇ ಹೆಸರಿಡೋಣ’ ಎಂದರು.</p>.<p>‘ಈ ಮೆಟ್ರೊ ನಿಲ್ದಾಣದ ಬಗ್ಗೆ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಕೂಡಾ ನನ್ನ ಜೊತೆ ಚರ್ಚಿಸಿದ್ದಾರೆ. ಕೃಷ್ಣ ಬೈರೇಗೌಡ ಅವರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನ ಅವರದ್ದು ಖಾಸಗಿ ಬೇಡಿಕೆ. ಇಷ್ಟೇ ವ್ಯತ್ಯಾಸ’ ಎಂದೂ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಟ್ಟ ಹಲಸೂರು ಮೆಟ್ರೊ ನಿಲ್ದಾಣ ನಿರ್ಮಾಣಕ್ಕೆ ಮುನಿರತ್ನ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಆ್ಯಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಟುಕಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಮುನಿರತ್ನ, ‘ಬೆಟ್ಟ ಹಲಸೂರು ಮೆಟ್ರೊ ನಿಲ್ದಾಣ ನಿರ್ಮಾಣಕ್ಕೆ ಎಂಬೆಸಿ ಸಂಸ್ಥೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಆ ನಿಲ್ದಾಣ ನಿರ್ಮಾಣ ಕೈಬಿಟ್ಟಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>ಅದಕ್ಕೆ ಉತ್ತರಿಸಿದ ಶಿವಕುಮಾರ್, 'ಸಿಎಸ್ಆರ್ ನಿಧಿಯಿಂದ ಮೆಟ್ರೊ ನಿಲ್ದಾಣ ನಿರ್ಮಿಸಿದರೆ ಆ ನಿಲ್ದಾಣಕ್ಕೆ ನಿಧಿ ನೀಡಿದ ಕಂಪನಿಯ ಹೆಸರಿಡಲು ಅವಕಾಶ ಮಾಡಿಕೊಡುತ್ತೇವೆ. ಈ ಮಾದರಿಗೆ ಪ್ರಧಾನಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುನಿರತ್ನ ಅವರಿಗೆ ಸೇರಿದ 70-80 ಎಕರೆ ಜಮೀನು ಬೆಟ್ಟ ಹಲಸೂರು ನಿಲ್ದಾಣದ ಸಮೀಪವಿದೆ. ಅದಕ್ಕೆ ಅವರು ಈ ಪ್ರಶ್ನೆ ಎತ್ತಿದ್ದಾರೆ’ ಎಂದರು.</p>.<p>ಮಧ್ಯಪ್ರವೇಶಿಸಿದ ಮುನಿರತ್ನ, 'ಶಿವಕುಮಾರ್ ಅವರು ಬಿಲ್ಡರ್ಗೆ ಕರೆ ಮಾಡಿ ಹಣ ಕಟ್ಟುತ್ತೀಯಾ ಇಲ್ಲವಾ ಎಂದು ಕೇಳಿದ 24 ತಾಸಿನಲ್ಲಿ ಎಂಬೆಸಿ ಬಿಲ್ಡರ್ನವರು ಹಣ ಕಟ್ಟುತ್ತಾರೆ. ಶಿವಕುಮಾರ್ ಅವರ ಮಾತನ್ನಷ್ಟೇ ಬಿಲ್ಡರ್ಗಳು ಕೇಳುತ್ತಾರೆ’ ಎಂದರು.</p>.<p>ಅದಕ್ಕೆ ಶಿವಕುಮಾರ್, ‘ಆ ಭಾಗದಲ್ಲಿ ಎಂಬೆಸಿ ಅವರದ್ದು ಸುಮಾರು 250 ಎಕರೆ ಜಮೀನಿದೆ. ಅವರು ಮೆಟ್ರೊ ನಿಲ್ದಾಣಕ್ಕೆ ತಮ್ಮ ಹೆಸರು ಬರಬೇಕೆಂದು ಒಪ್ಪಂದ ಮಾಡಿಕೊಂಡಿದ್ದಾರೆ. ₹ 140 ಕೋಟಿ ಮೊತ್ತದಲ್ಲಿ ನಿರ್ಮಿಸಲಾಗುವ ಮೆಟ್ರೊ ನಿಲ್ದಾಣಕ್ಕೆ ₹ 120 ಕೋಟಿ ನೀಡುವುದಾಗಿ ಹೇಳಿದ್ದರು. ಅದರಲ್ಲಿ ಕೇವಲ ₹ 1 ಕೋಟಿ ನೀಡಿದ್ದಾರೆ’ ಎಂದರು.</p>.<p>ಆಗ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಎಂಬೆಸಿಯವರು ಬಾಕಿ ₹ 119 ಕೋಟಿ ನೀಡಲಿ ಎಂದು ಉಪಮುಖ್ಯಮಂತ್ರಿ ಅವರು ಧಮ್ಕಿ ಹಾಕಲಿ ಎಂದಷ್ಟೇ ಮುನಿರತ್ನ ಹೇಳುತ್ತಿದ್ದಾರೆ’ ಎಂದರು.</p>.<p>ಅದಕ್ಕೆ ಶಿವಕುಮಾರ್, ‘ನಾನೇಕೆ ಧಮ್ಕಿ ಹಾಕಲಿ? ಬೇಕಾದರೆ ಒಪ್ಪಂದ ರದ್ದು ಮಾಡೋಣ. ಮುನಿರತ್ನ ಹಣ ಕೊಟ್ಟರೆ ‘ಮುನಿರತ್ನ ಆ್ಯಂಡ್ ಕಂಪನಿ’ ಎಂದೇ ಹೆಸರಿಡೋಣ’ ಎಂದರು.</p>.<p>‘ಈ ಮೆಟ್ರೊ ನಿಲ್ದಾಣದ ಬಗ್ಗೆ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಕೂಡಾ ನನ್ನ ಜೊತೆ ಚರ್ಚಿಸಿದ್ದಾರೆ. ಕೃಷ್ಣ ಬೈರೇಗೌಡ ಅವರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನ ಅವರದ್ದು ಖಾಸಗಿ ಬೇಡಿಕೆ. ಇಷ್ಟೇ ವ್ಯತ್ಯಾಸ’ ಎಂದೂ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>