ಸೋಮವಾರ ಇಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ, ‘370ನೇ ವಿಧಿ ಹಿಂತೆಗೆದ ಬಗ್ಗೆ ಕೇಂದ್ರ ಸರ್ಕಾರವೇ ದೇಶದಾದ್ಯಂತ ಪ್ರಚಾರ ಹಮ್ಮಿಕೊಂಡಿದೆ. ಆದರೆ, ರಾಜ್ಯದಲ್ಲಿ ಉಂಟಾದ ಪ್ರವಾಹ ಸಂತ್ರಸ್ತರನ್ನು ಕಣ್ಣೆತ್ತಿಯೂ ನೋಡಿಲ್ಲ. ಈವರೆಗೆ ಬಿಡಿಗಾಸನ್ನೂ ನೀಡಿಲ್ಲ. ಪ್ರಚಾರಕ್ಕೆ ಬರುವ ನೀವು, ಪ್ರವಾಹ ಪರಿಸ್ಥಿತಿಯನ್ನು ಕೇಂದ್ರಕ್ಕೆ ಏಕೆ ಮನವರಿಕೆ ಮಾಡಬಾರದು’ ಎಂದು ಪತ್ರಕರ್ತರು ಪ್ರಶ್ನಿಸಿದರು.