<p><strong>ಬೆಳಗಾವಿ:</strong> ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರನ್ನು ಬದಲಾವಣೆ ಮಾಡಬೇಕು ಎಂಬ ಕೂಗು ಪಕ್ಷದ ವಲಯದಲ್ಲಿ ಎದ್ದಿದೆ.</p>.<p>ರಾವ್ ಅವರು ಚುನಾವಣಾ ಸಮಯದಲ್ಲಷ್ಟೇ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ. ರಾಜ್ಯದ ನಾಯಕರ ಕೈಗೆ ಸಿಗುವುದಿಲ್ಲ. ಕೆಲವೇ ನಾಯಕರ ಮಾತಿಗೆ ಮಣೆ ಹಾಕುತ್ತಾರೆ ಎಂಬ ಆಕ್ಷೇಪಗಳು ಇವೆ.</p>.<p>ಚುನಾವಣೆಗೆ ಮುನ್ನವೇ ರಾವ್ ಅವರನ್ನು ಬದಲಿಸಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದರು. ಬಳಿಕ ಪ್ರಸ್ತಾಪ ಕೈಬಿಟ್ಟಿದ್ದರು. ರಾಜ್ಯ ಚುನಾವಣಾ ಉಸ್ತುವಾರಿಗಳನ್ನಾಗಿ ಕೇಂದ್ರ ಸಚಿವರಾದ ಪ್ರಕಾಶ ಜಾವಡೇಕರ್, ಪೀಯೂಷ್ ಗೋಯಲ್ ಅವರನ್ನು ನೇಮಕ ಮಾಡಲಾಗಿತ್ತು. ಚುನಾವಣಾ ರಣತಂತ್ರ ಹೆಣೆಯುವ ಹೊಣೆಯನ್ನು ಅವರಿಗೆ ವಹಿಸಲಾಗಿತ್ತು.</p>.<p>ಇಷ್ಟೆಲ್ಲ ಕಸರತ್ತಿನ ನಂತರವೂ ಪಕ್ಷ ಗಳಿಸಿದ್ದು 104 ಸ್ಥಾನಗಳನ್ನಷ್ಟೇ. ಆ ಬಳಿಕ ಪಕ್ಷವನ್ನು ಅಧಿಕಾರದ ಚುಕ್ಕಾಣಿಗೆ ಏರಿಸುವಲ್ಲಿ ತಂತ್ರಗಾರಿಕೆ ರೂಪಿಸಲಿಲ್ಲ. ಕಳೆದ ಆರು ತಿಂಗಳಲ್ಲಿ ಎರಡು ಸಲವಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದಾರೆ ಎಂಬುದು ಪಕ್ಷದ ಕೆಲವು ಮುಖಂಡರ ಆರೋಪ.</p>.<p>ತೆಲಂಗಾಣ ಉಸ್ತುವಾರಿ ಹೊಣೆ ಸಹ ಮುರಳೀಧರ ರಾವ್ ಅವರಿಗೆ ಇದೆ. ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದೆ. ಇದರ ಬೆನ್ನಲ್ಲೇ, ಉಸ್ತುವಾರಿ ಬದಲಾವಣೆಯ ಬೇಡಿಕೆ ಪಕ್ಷದೊಳಗೆ ಎದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರನ್ನು ಬದಲಾವಣೆ ಮಾಡಬೇಕು ಎಂಬ ಕೂಗು ಪಕ್ಷದ ವಲಯದಲ್ಲಿ ಎದ್ದಿದೆ.</p>.<p>ರಾವ್ ಅವರು ಚುನಾವಣಾ ಸಮಯದಲ್ಲಷ್ಟೇ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ. ರಾಜ್ಯದ ನಾಯಕರ ಕೈಗೆ ಸಿಗುವುದಿಲ್ಲ. ಕೆಲವೇ ನಾಯಕರ ಮಾತಿಗೆ ಮಣೆ ಹಾಕುತ್ತಾರೆ ಎಂಬ ಆಕ್ಷೇಪಗಳು ಇವೆ.</p>.<p>ಚುನಾವಣೆಗೆ ಮುನ್ನವೇ ರಾವ್ ಅವರನ್ನು ಬದಲಿಸಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದರು. ಬಳಿಕ ಪ್ರಸ್ತಾಪ ಕೈಬಿಟ್ಟಿದ್ದರು. ರಾಜ್ಯ ಚುನಾವಣಾ ಉಸ್ತುವಾರಿಗಳನ್ನಾಗಿ ಕೇಂದ್ರ ಸಚಿವರಾದ ಪ್ರಕಾಶ ಜಾವಡೇಕರ್, ಪೀಯೂಷ್ ಗೋಯಲ್ ಅವರನ್ನು ನೇಮಕ ಮಾಡಲಾಗಿತ್ತು. ಚುನಾವಣಾ ರಣತಂತ್ರ ಹೆಣೆಯುವ ಹೊಣೆಯನ್ನು ಅವರಿಗೆ ವಹಿಸಲಾಗಿತ್ತು.</p>.<p>ಇಷ್ಟೆಲ್ಲ ಕಸರತ್ತಿನ ನಂತರವೂ ಪಕ್ಷ ಗಳಿಸಿದ್ದು 104 ಸ್ಥಾನಗಳನ್ನಷ್ಟೇ. ಆ ಬಳಿಕ ಪಕ್ಷವನ್ನು ಅಧಿಕಾರದ ಚುಕ್ಕಾಣಿಗೆ ಏರಿಸುವಲ್ಲಿ ತಂತ್ರಗಾರಿಕೆ ರೂಪಿಸಲಿಲ್ಲ. ಕಳೆದ ಆರು ತಿಂಗಳಲ್ಲಿ ಎರಡು ಸಲವಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದಾರೆ ಎಂಬುದು ಪಕ್ಷದ ಕೆಲವು ಮುಖಂಡರ ಆರೋಪ.</p>.<p>ತೆಲಂಗಾಣ ಉಸ್ತುವಾರಿ ಹೊಣೆ ಸಹ ಮುರಳೀಧರ ರಾವ್ ಅವರಿಗೆ ಇದೆ. ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದೆ. ಇದರ ಬೆನ್ನಲ್ಲೇ, ಉಸ್ತುವಾರಿ ಬದಲಾವಣೆಯ ಬೇಡಿಕೆ ಪಕ್ಷದೊಳಗೆ ಎದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>