ಬೆಂಗಳೂರು: ವಿಧಾನಸೌಧ ಹಿಂಭಾಗದಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಕಚೇರಿಯಲ್ಲಿ ಮಹಿಳಾ ಉದ್ಯೋಗಿ ಜಯಲಕ್ಷ್ಮಿ ಎಂಬುವರ ಮೇಲೆ ಅದೇ ಕಚೇರಿ ಎಫ್ಡಿಎನಟರಾಜ್ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.
ಸೋಮವಾರಬೆಳಿಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದ್ದು, ಗಾಯಗೊಂಡಿರುವ ಜಯಲಕ್ಷ್ಮಿ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಆರೋಪಿಯನ್ನು ವಶಕ್ಕೆ ಪಡೆದಿರುವ ವಿಧಾನಸೌಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಿಗ್ಗೆ ಕಚೇರಿಗೆ ಮಚ್ಚಿನಸಮೇತ ಬಂದಿದ್ದ ಆರೋಪಿಯು ಜಯಲಕ್ಷ್ಮಿ ಜೊತೆ ಜಗಳ ತೆಗೆದು ಮಚ್ಚಿನಿಂದ ಕತ್ತಿನ ಭಾಗಕ್ಕೆ ಹೊಡೆದಿದ್ದಾನೆ ಎಂದು ವಿಧಾನಸೌಧ ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.