<p><strong>ಬೆಂಗಳೂರು:</strong> ಹಣ ಕೊಡುವುದಾಗಿ ಅಪಾರ್ಟ್ಮೆಂಟ್ಗೆ ಕರೆಸಿಕೊಂಡು ರೌಡಿಯನ್ನು ಕೊಲೆ ಮಾಡಿರುವ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಮೃತದೇಹ ತಮಿಳುನಾಡಿನಲ್ಲಿ ಪತ್ತೆಯಾಗಿದೆ. ಕೊತ್ತನೂರು ನಿವಾಸಿ ಗುಣ(30) ಕೊಲೆಯಾದ ರೌಡಿಶೀಟರ್.</p>.<p>ಕೃತ್ಯ ಎಸಗಿದ ಬ್ರಿಜೇಶ್ ಸೇರಿ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳು ಜ.10ರಂದು ಗುಣನನ್ನು ಅಪಾರ್ಟ್ಮೆಂಟ್ಗೆ ಕೆರಸಿಕೊಂಡು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಗುಣ ಅವರ ಪತ್ನಿ ಜೋಸ್ಫಿನ್ ನೀಡಿದ ದೂರು ಆಧರಿಸಿ ತನಿಖೆ ನಡೆಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p><br>ಕೊಲೆಯಾದ ಗುಣ ಕೊತ್ತನೂರು ಠಾಣೆಯ ರೌಡಿಶೀಟರ್ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p><p><br><strong>ಮೃತ ದೇಹ ಸಾಗಾಟ ದೃಶ್ಯ ಸೆರೆ:</strong><br>ಪ್ರಕರಣ ದಾಖಲಿಸಿಕೊಂಡ ಬಾಗಲೂರು ಠಾಣೆ ಪೊಲೀಸರು ಅಪಾರ್ಟ್ಮೆಂಟ್ಗೆ ತೆರಳಿ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಮೃತದೇಹ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿತ್ತು.</p>.<p>ಗುಣ ಅವರನ್ನು ಕೊಲೆ ಮಾಡಿ ಮೃತದೇಹ ಯಾರಿಗೂ ಸಿಗಬಾರದೆಂದು ಹೊರಗೆ ತೆಗೆದುಕೊಂಡು ಬಿಸಾಡಲು ಹೋಗಿರುವುದು ಗೊತ್ತಾಗಿದೆ. ಬಳಿಕ ತನಿಖೆ ನಡೆಸಿದಾಗ ಗುಣ ಮೃತದೇಹ ತಮಿಳುನಾಡಿನ ಪೆನ್ನಾಂಗಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಣ ಕೊಡುವುದಾಗಿ ಅಪಾರ್ಟ್ಮೆಂಟ್ಗೆ ಕರೆಸಿಕೊಂಡು ರೌಡಿಯನ್ನು ಕೊಲೆ ಮಾಡಿರುವ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಮೃತದೇಹ ತಮಿಳುನಾಡಿನಲ್ಲಿ ಪತ್ತೆಯಾಗಿದೆ. ಕೊತ್ತನೂರು ನಿವಾಸಿ ಗುಣ(30) ಕೊಲೆಯಾದ ರೌಡಿಶೀಟರ್.</p>.<p>ಕೃತ್ಯ ಎಸಗಿದ ಬ್ರಿಜೇಶ್ ಸೇರಿ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳು ಜ.10ರಂದು ಗುಣನನ್ನು ಅಪಾರ್ಟ್ಮೆಂಟ್ಗೆ ಕೆರಸಿಕೊಂಡು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಗುಣ ಅವರ ಪತ್ನಿ ಜೋಸ್ಫಿನ್ ನೀಡಿದ ದೂರು ಆಧರಿಸಿ ತನಿಖೆ ನಡೆಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p><br>ಕೊಲೆಯಾದ ಗುಣ ಕೊತ್ತನೂರು ಠಾಣೆಯ ರೌಡಿಶೀಟರ್ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p><p><br><strong>ಮೃತ ದೇಹ ಸಾಗಾಟ ದೃಶ್ಯ ಸೆರೆ:</strong><br>ಪ್ರಕರಣ ದಾಖಲಿಸಿಕೊಂಡ ಬಾಗಲೂರು ಠಾಣೆ ಪೊಲೀಸರು ಅಪಾರ್ಟ್ಮೆಂಟ್ಗೆ ತೆರಳಿ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಮೃತದೇಹ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿತ್ತು.</p>.<p>ಗುಣ ಅವರನ್ನು ಕೊಲೆ ಮಾಡಿ ಮೃತದೇಹ ಯಾರಿಗೂ ಸಿಗಬಾರದೆಂದು ಹೊರಗೆ ತೆಗೆದುಕೊಂಡು ಬಿಸಾಡಲು ಹೋಗಿರುವುದು ಗೊತ್ತಾಗಿದೆ. ಬಳಿಕ ತನಿಖೆ ನಡೆಸಿದಾಗ ಗುಣ ಮೃತದೇಹ ತಮಿಳುನಾಡಿನ ಪೆನ್ನಾಂಗಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>