ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಪೋಕ್ಸೊ ಪ್ರಕರಣ: ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ಬಂಧನ

Published 20 ನವೆಂಬರ್ 2023, 9:58 IST
Last Updated 20 ನವೆಂಬರ್ 2023, 9:58 IST
ಅಕ್ಷರ ಗಾತ್ರ

ದಾವಣಗೆರೆ: ಎರಡನೇ ಪೋಕ್ಸೊ ಪ್ರಕರಣದಲ್ಲಿ ದಾವಣಗೆರೆಯ ವಿರಕ್ತಮಠದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದರು.

ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಸಿಪಿಐ ವೈ.ಮುದ್ದುರಾಜು, ಪಿಎಸ್ಐ ಡಿ.ಶಿವಕುಮಾರ್, ಡಿವೈಎಸ್ಪಿ ಕೆ.ಆರ್.ಅನಿಲ್ ಕುಮಾರ್ ಅವರ ತಂಡ ಇಲ್ಲಿನ ವಿರಕ್ತ ಮಠದಲ್ಲಿ ಪೊಲೀಸರು ಬಂಧಿಸಿತು.

ಮೊದಲನೇ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಕಳೆದ ಗುರುವಾರ ಬಿಡುಗಡೆಯಾದ ಹಿನ್ನೆಲೆಯಲ್ಲಿ ವಿರಕ್ತಮಠದಲ್ಲಿ ವಾಸ್ತವ್ಯ ಹೂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT