ವಿಚಾರಣೆ ವೇಳೆ ಒಡನಾಡಿ ಸೇವಾ ಸಂಸ್ಥೆ ಪರ ವಕೀಲ ಡಿ.ಸಿ.ಶ್ರೀನಿವಾಸ್ ವಾದ ಮಂಡಿಸಿ, ’ಆರೋಪಿ ಶರಣರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಂತ್ರಸ್ತ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿರುವ ಶರಣರ ನಡೆ ಮ್ಯಾಜಿಸ್ಟ್ರೇಟರ ಮುಂದೆ ಬಾಲಕಿಯರು ನೀಡಿರುವ ಹೇಳಿಕೆಯಲ್ಲಿ ಸಂಪೂರ್ಣ ಬಿಂಬಿತವಾಗಿದೆ. ನ್ಯಾಯಪೀಠ ಇದನ್ನು ಗಂಭೀರವಾಗಿ ಪರಿಗಣಿಸಬೇಕು‘ ಎಂದು ಕೋರಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ನವೆಂಬರ್ 8ರಂದು ಆದೇಶ ಪ್ರಕಟಿಸುವ ಸಂಭಾವ್ಯ ದಿನಾಂಕವನ್ನು ಪ್ರಕಟಿಸಿದೆ.