<p><strong>ಬೆಂಗಳೂರು:</strong> ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಗ್ಗೆ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಆರೋಪಿಯೂ ಆಗಿರುವ ಸಂಗೀತ ನಿರ್ದೇಶಕ ಹಂಸಲೇಖ ಗುರುವಾರ ಹಾಜರಾದರು. ಇದೇ ಸಂದರ್ಭದಲ್ಲೇ ಬಜರಂಗದಳ ಸದಸ್ಯರು, ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದರು.</p>.<p>ಮೈಸೂರಿನಲ್ಲಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಂಸಲೇಖ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ವಿ–ಪ್ರ ವೇದಿಕೆ ಸದಸ್ಯರು ಬಸವನಗುಡಿ ಠಾಣೆಗೆ ದೂರು ನೀಡಿದ್ದರು.</p>.<p>ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಹಂಸಲೇಖ ಅವರಿಗೆ ನೋಟಿಸ್ ನೀಡಿದ್ದರು. ಅನಾರೋಗ್ಯ ಕಾರಣ ನೀಡಿದ್ದ ಹಂಸಲೇಖ ಎರಡು ಬಾರಿ ವಿಚಾರಣೆಗೆ ಗೈರಾಗಿದ್ದರು. ಮೂರನೇ ನೋಟಿಸ್ ಬರುತ್ತಿದ್ದಂತೆ ಬಸವನಗುಡಿ ಠಾಣೆಗೆ ಬಂದು, ವಿಚಾರಣೆ ಎದುರಿಸಿದರು.</p>.<p><strong>ಠಾಣೆ ಎದುರು ಪ್ರತಿಭಟನೆ:</strong> ಹಂಸಲೇಖ ವಿಚಾರಣೆಗೆ ಬರುತ್ತಿದ್ದ ಸುದ್ದಿ ತಿಳಿದು ಬಜರಂಗದಳ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಠಾಣೆ ಎದುರು ಸೇರಿದ್ದರು. ಹಂಸಲೇಖ ಅವರ ಜೊತೆಯಲ್ಲಿ ನಟ ಚೇತನ್ ಠಾಣೆಗೆ ಬಂದಿದ್ದರು. ಇದನ್ನು ಖಂಡಿಸಿದ ಸದಸ್ಯರು, ಕಪ್ಪು ಬಾವುಟ ಪ್ರದರ್ಶಿಸಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.</p>.<p>ಇದೇ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಸಹ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು, ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.</p>.<p>ಇದನ್ನೂ ಓದಿ.. <strong><a href="https://www.prajavani.net/entertainment/cinema/music-director-hamsalekha-apologizes-after-non-veg-food-comments-on-pejawar-shree-884008.html">ಪೇಜಾವರ ಸ್ವಾಮೀಜಿ ಕುರಿತ ಹೇಳಿಕೆ: ಕ್ಷಮೆಯಾಚಿಸಿದ ಹಂಸಲೇಖ</a></strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಗ್ಗೆ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಆರೋಪಿಯೂ ಆಗಿರುವ ಸಂಗೀತ ನಿರ್ದೇಶಕ ಹಂಸಲೇಖ ಗುರುವಾರ ಹಾಜರಾದರು. ಇದೇ ಸಂದರ್ಭದಲ್ಲೇ ಬಜರಂಗದಳ ಸದಸ್ಯರು, ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದರು.</p>.<p>ಮೈಸೂರಿನಲ್ಲಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಂಸಲೇಖ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ವಿ–ಪ್ರ ವೇದಿಕೆ ಸದಸ್ಯರು ಬಸವನಗುಡಿ ಠಾಣೆಗೆ ದೂರು ನೀಡಿದ್ದರು.</p>.<p>ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಹಂಸಲೇಖ ಅವರಿಗೆ ನೋಟಿಸ್ ನೀಡಿದ್ದರು. ಅನಾರೋಗ್ಯ ಕಾರಣ ನೀಡಿದ್ದ ಹಂಸಲೇಖ ಎರಡು ಬಾರಿ ವಿಚಾರಣೆಗೆ ಗೈರಾಗಿದ್ದರು. ಮೂರನೇ ನೋಟಿಸ್ ಬರುತ್ತಿದ್ದಂತೆ ಬಸವನಗುಡಿ ಠಾಣೆಗೆ ಬಂದು, ವಿಚಾರಣೆ ಎದುರಿಸಿದರು.</p>.<p><strong>ಠಾಣೆ ಎದುರು ಪ್ರತಿಭಟನೆ:</strong> ಹಂಸಲೇಖ ವಿಚಾರಣೆಗೆ ಬರುತ್ತಿದ್ದ ಸುದ್ದಿ ತಿಳಿದು ಬಜರಂಗದಳ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಠಾಣೆ ಎದುರು ಸೇರಿದ್ದರು. ಹಂಸಲೇಖ ಅವರ ಜೊತೆಯಲ್ಲಿ ನಟ ಚೇತನ್ ಠಾಣೆಗೆ ಬಂದಿದ್ದರು. ಇದನ್ನು ಖಂಡಿಸಿದ ಸದಸ್ಯರು, ಕಪ್ಪು ಬಾವುಟ ಪ್ರದರ್ಶಿಸಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.</p>.<p>ಇದೇ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಸಹ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು, ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.</p>.<p>ಇದನ್ನೂ ಓದಿ.. <strong><a href="https://www.prajavani.net/entertainment/cinema/music-director-hamsalekha-apologizes-after-non-veg-food-comments-on-pejawar-shree-884008.html">ಪೇಜಾವರ ಸ್ವಾಮೀಜಿ ಕುರಿತ ಹೇಳಿಕೆ: ಕ್ಷಮೆಯಾಚಿಸಿದ ಹಂಸಲೇಖ</a></strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>