ಮುಸ್ಲಿಮರ ಶೇ 4ರಷ್ಟು ಮೀಸಲಾತಿ ಹಿಂಪಡೆದ ಕರ್ನಾಟಕ ಸರ್ಕಾರದ ಮಾರ್ಚ್ 27ರ ಆದೇಶ ಪ್ರಶ್ನಿಸಿ ಎಲ್. ಗುಲಾಮ್ ರಸೂಲ್ ಮತ್ತು ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ‘ಮುಸ್ಲಿಮರನ್ನು ಒಬಿಸಿ ಪಟ್ಟಿಯಿಂದ ಕೈಬಿಟ್ಟಿರುವುದು ಕಾನೂನುಬಾಹಿರ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಪಟ್ಟಿಗೆ ಸೇರಿಸಿರುವುದು ಕೂಡ ಕಾನೂನಿಗೆ ವಿರುದ್ಧ’ ಎಂದು ಅರ್ಜಿದಾರರು ದೂರಿದ್ದರು.