ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಶಾಸಕ ಎನ್.ಎ. ಹ್ಯಾರಿಸ್ ಮತ್ತು ವಿಧಾನ ಪರಿಷತ್ ಸದಸ್ಯ ಅಬ್ದುಲ್ ನಜೀರ್ ನಿಯೋಗದಲ್ಲಿದ್ದರು. ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಎಲ್ಲ ಮಸೀದಿಗಳೂ ಸಿದ್ಧವಾಗಿವೆ ಎಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ.