ಧಾರವಾಡ ಮತ್ತು ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಸಿದ್ದಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿರುವ ಹಿನ್ನೆಲೆಯಲ್ಲಿ ಸಚಿವರನ್ನು ಸಿದ್ದಿಗಳು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು ನೆರೆಹೊರೆಯ ದೇಶಗಳಲ್ಲಿ ಮತೀಯ ಹಿಂಸೆಯನ್ನು ತಾಳಲಾರದೆ ಭಾರತಕ್ಕೆ ವಲಸೆ ಬಂದವರಿಗೆ ಈ ದೇಶದ ಪೌರತ್ವ ನೀಡುವುದು ಕಾಯ್ದೆಯ ಉದ್ದೇಶವಾಗಿದೆಯೇ ಹೊರತು, ಯಾರ ಪೌರತ್ವವನ್ನು ಕಿತ್ತುಕೊಳ್ಳುವ ಉದ್ದೇಶವಿಲ್ಲ ಎಂದರು.