<p><strong>ಚಿಕ್ಕೋಡಿ:</strong> ಇಲ್ಲಿನ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರ ‘ಹನುಮ’ ಎಂಬ ಎತ್ತು ಶುಕ್ರವಾರ ಮೃತಪಟ್ಟಿದ್ದು, ಅದಕ್ಕೆ ಗೌರವಪೂರ್ವಕವಾಗಿ ಹಿಂದೂ ಸಂಪ್ರದಾಯದಂತೆ ಸಕಲ ವಿಧಿ–ವಿಧಾನ ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<p>22 ವರ್ಷಗಳ ಹಿಂದೆ ಮಹಾರಾಷ್ಟ್ರದ ಕರಸುಂಡಿ ಗ್ರಾಮದಿಂದ ತಾಜುದ್ದೀನ್ ಅವರು ಎರಡು ಹೋರಿ ಕರುಗಳನ್ನು ಖರೀದಿಸಿದ್ದರು. ಒಂದಕ್ಕೆ ರಾಜಾ, ಇನ್ನೊಂದಕ್ಕೆ ಹನುಮ ಎಂದು ಹೆಸರಿಟ್ಟಿದ್ದರು. ಅವುಗಳ ನೆರವಿನಿಂದ ಐದೂವರೆ ಎಕರೆ ಜಮೀನಿಲ್ಲಿ ಕೃಷಿ ಮಾಡುತ್ತಿದ್ದರು.</p>.<p>2022ರ ಸೆಪ್ಟೆಂಬರ್ನಲ್ಲಿ ಕ್ಯಾನ್ಸರ್ನಿಂದ ಮೃತಪಟ್ಟ ರಾಜಾ ಎತ್ತಿಗೂ ಹಿಂದೂ ಸಂಪ್ರದಾಯದಂತೆ ತಮ್ಮ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದರು. ಈಗ ಸಾವನ್ನಪ್ಪಿದ ಹನುಮ ಎತ್ತಿಗೂ ರಾಜಾ ಪಕ್ಕದಲ್ಲೇ ಮಣ್ಣು ಮಾಡಿದರು.</p>.<p>ಮಕ್ಕಳಂತೆ ಸಾಕಿದ್ದ ಪ್ರೀತಿಯ ಎತ್ತುಗಳನ್ನು ನೆನೆದು ತಾಜುದ್ದೀನ್ ಅವರ ತಾಯಿ ಲಾಲಬಿ, ಪತ್ನಿ ಮೊಹಬ್ಬತ್, ಮಕ್ಕಳಾದ ತಂಜಿಲಾ, ತನ್ವೀರಾ, ಇಬ್ರಾಹಿಂ ಕಣ್ಣೀರು ಹಾಕಿದರು. ಪೂಜೆ ಸಲ್ಲಿಸಿ, ಆರತಿ ಮಾಡಿ, ನೈವೇದ್ಯ ಇಟ್ಟರು. ಗ್ರಾಮಸ್ಥರು ಇದಕ್ಕೆ ಸಾಕ್ಷಿಯಾದರು.</p>.<div><blockquote>ಬರುವ ಶ್ರಾವಣ ಮಾಸದಲ್ಲಿ ಎರಡೂ ಎತ್ತುಗಳಿಗೆ ಪುಟ್ಟ ದೇವಸ್ಥಾನ ಕಟ್ಟಿಸಿ ಪೂಜೆ ಮಾಡುತ್ತೇವೆ. ಎತ್ತುಗಳು ನಮ್ಮ ಕುಟುಂಬಕ್ಕೆ ದೇವರ ಸಮಾನ.</blockquote><span class="attribution">–ತಾಜುದ್ದೀನ್ ಜಾಡವಾಲೆ, ರೈತ</span></div>.<div><blockquote>ಮುಸ್ಲಿಂ ಕುಟುಂಬದವರು ಎತ್ತುಗಳಿಗೆ ಹಿಂದೂ ದೇವರ ಹೆಸರಿಟ್ಟಿದ್ದು ಸಹಬಾಳ್ವೆಯ ಪ್ರತೀಕ. ಶವಗಳಿಗೂ ಗೌರವ ನೀಡಿದ್ದು ಮಾದರಿ </blockquote><span class="attribution">–ರವೀಂದ್ರ ಬಾವಿಮನಿ, ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ಇಲ್ಲಿನ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರ ‘ಹನುಮ’ ಎಂಬ ಎತ್ತು ಶುಕ್ರವಾರ ಮೃತಪಟ್ಟಿದ್ದು, ಅದಕ್ಕೆ ಗೌರವಪೂರ್ವಕವಾಗಿ ಹಿಂದೂ ಸಂಪ್ರದಾಯದಂತೆ ಸಕಲ ವಿಧಿ–ವಿಧಾನ ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<p>22 ವರ್ಷಗಳ ಹಿಂದೆ ಮಹಾರಾಷ್ಟ್ರದ ಕರಸುಂಡಿ ಗ್ರಾಮದಿಂದ ತಾಜುದ್ದೀನ್ ಅವರು ಎರಡು ಹೋರಿ ಕರುಗಳನ್ನು ಖರೀದಿಸಿದ್ದರು. ಒಂದಕ್ಕೆ ರಾಜಾ, ಇನ್ನೊಂದಕ್ಕೆ ಹನುಮ ಎಂದು ಹೆಸರಿಟ್ಟಿದ್ದರು. ಅವುಗಳ ನೆರವಿನಿಂದ ಐದೂವರೆ ಎಕರೆ ಜಮೀನಿಲ್ಲಿ ಕೃಷಿ ಮಾಡುತ್ತಿದ್ದರು.</p>.<p>2022ರ ಸೆಪ್ಟೆಂಬರ್ನಲ್ಲಿ ಕ್ಯಾನ್ಸರ್ನಿಂದ ಮೃತಪಟ್ಟ ರಾಜಾ ಎತ್ತಿಗೂ ಹಿಂದೂ ಸಂಪ್ರದಾಯದಂತೆ ತಮ್ಮ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದರು. ಈಗ ಸಾವನ್ನಪ್ಪಿದ ಹನುಮ ಎತ್ತಿಗೂ ರಾಜಾ ಪಕ್ಕದಲ್ಲೇ ಮಣ್ಣು ಮಾಡಿದರು.</p>.<p>ಮಕ್ಕಳಂತೆ ಸಾಕಿದ್ದ ಪ್ರೀತಿಯ ಎತ್ತುಗಳನ್ನು ನೆನೆದು ತಾಜುದ್ದೀನ್ ಅವರ ತಾಯಿ ಲಾಲಬಿ, ಪತ್ನಿ ಮೊಹಬ್ಬತ್, ಮಕ್ಕಳಾದ ತಂಜಿಲಾ, ತನ್ವೀರಾ, ಇಬ್ರಾಹಿಂ ಕಣ್ಣೀರು ಹಾಕಿದರು. ಪೂಜೆ ಸಲ್ಲಿಸಿ, ಆರತಿ ಮಾಡಿ, ನೈವೇದ್ಯ ಇಟ್ಟರು. ಗ್ರಾಮಸ್ಥರು ಇದಕ್ಕೆ ಸಾಕ್ಷಿಯಾದರು.</p>.<div><blockquote>ಬರುವ ಶ್ರಾವಣ ಮಾಸದಲ್ಲಿ ಎರಡೂ ಎತ್ತುಗಳಿಗೆ ಪುಟ್ಟ ದೇವಸ್ಥಾನ ಕಟ್ಟಿಸಿ ಪೂಜೆ ಮಾಡುತ್ತೇವೆ. ಎತ್ತುಗಳು ನಮ್ಮ ಕುಟುಂಬಕ್ಕೆ ದೇವರ ಸಮಾನ.</blockquote><span class="attribution">–ತಾಜುದ್ದೀನ್ ಜಾಡವಾಲೆ, ರೈತ</span></div>.<div><blockquote>ಮುಸ್ಲಿಂ ಕುಟುಂಬದವರು ಎತ್ತುಗಳಿಗೆ ಹಿಂದೂ ದೇವರ ಹೆಸರಿಟ್ಟಿದ್ದು ಸಹಬಾಳ್ವೆಯ ಪ್ರತೀಕ. ಶವಗಳಿಗೂ ಗೌರವ ನೀಡಿದ್ದು ಮಾದರಿ </blockquote><span class="attribution">–ರವೀಂದ್ರ ಬಾವಿಮನಿ, ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>