ಅಭಿಮನ್ಯು ಜತೆಗೆ ದಸರಾದಲ್ಲಿ ಪಾಲ್ಗೊಳ್ಳಲು ಕುಶಾಲನಗರ ದುಬಾರೆ ಸಾಕಾನೆ ಶಿಬಿರದ ವಿಕ್ರಂ (58), ಹರ್ಷ (54), ವಿಜಯ (53), ಕಾವೇರಿ (50), ಗೋಪಿ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಈ ಆನೆಗಳು ಅಕ್ಟೋಬರ್ 2ರಂದು ಸಂಪ್ರದಾಯದಂತೆ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿಗೆ ಪ್ರಯಾಣ ಬೆಳೆಸಿ ಬಳಿಕ ಮೈಸೂರಿಗೆ ತೆರಳಲಿವೆ.