<p><strong>ಮೈಸೂರು</strong>: ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ, ಆಕೆಯ ಸ್ನೇಹಿತ ಪೊಲೀಸರಿಗೆ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.</p>.<p>‘ಸ್ನೇಹಿತೆಯೊಂದಿಗೆ ಸಂಜೆ ವಾಯುವಿಹಾರಕ್ಕೆ ತೆರಳಿದ್ದಾಗ 6 ಆರೋಪಿಗಳು ದೊಣ್ಣೆ ಮತ್ತು ಕಲ್ಲುಗಳಿಂದ ನನ್ನ ಮೇಲೆ ಹಲ್ಲೆ ನಡೆಸಿದರು. ಯುವತಿಯ ಮೇಲೂ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದರು. ಬಳಿಕ ನನ್ನ ತಂದೆಗೆ ನನ್ನಿಂದಲೇ ಕರೆ ಮಾಡಿಸಿ ₹3 ಲಕ್ಷವನ್ನು ಆನ್ಲೈನ್ನಲ್ಲೇ ಖಾತೆಗೆ ಹಾಕುವಂತೆ ಆಗ್ರಹಿಸಿದರು. ನಿರಾಕರಿಸಿದ್ದಕ್ಕೆ ಇನ್ನಷ್ಟು ಹೊಡೆದರು’ ಎಂದು ಸಂತ್ರಸ್ಥೆ ಸ್ನೇಹಿತ ಹೇಳಿಕೆ ನೀಡಿದ್ದಾರೆ.</p>.<p>ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಮಂಗಳವಾರ ರಾತ್ರಿ ಸುಮಾರು 7.30ರ ವೇಳೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ವಿಚಾರ ಬುಧವಾರ ಬಹಿರಂಗಗೊಂಡಿತ್ತು. ಪ್ರಕರಣ ಇಡೀ ದೇಶದ ಗಮನ ಸೆಳೆದಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.</p>.<p>ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅನುಮಾನಗೊಂಡಿದ್ದು, ಅವರ ಹುಡುಕಾಟ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ, ಆಕೆಯ ಸ್ನೇಹಿತ ಪೊಲೀಸರಿಗೆ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.</p>.<p>‘ಸ್ನೇಹಿತೆಯೊಂದಿಗೆ ಸಂಜೆ ವಾಯುವಿಹಾರಕ್ಕೆ ತೆರಳಿದ್ದಾಗ 6 ಆರೋಪಿಗಳು ದೊಣ್ಣೆ ಮತ್ತು ಕಲ್ಲುಗಳಿಂದ ನನ್ನ ಮೇಲೆ ಹಲ್ಲೆ ನಡೆಸಿದರು. ಯುವತಿಯ ಮೇಲೂ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದರು. ಬಳಿಕ ನನ್ನ ತಂದೆಗೆ ನನ್ನಿಂದಲೇ ಕರೆ ಮಾಡಿಸಿ ₹3 ಲಕ್ಷವನ್ನು ಆನ್ಲೈನ್ನಲ್ಲೇ ಖಾತೆಗೆ ಹಾಕುವಂತೆ ಆಗ್ರಹಿಸಿದರು. ನಿರಾಕರಿಸಿದ್ದಕ್ಕೆ ಇನ್ನಷ್ಟು ಹೊಡೆದರು’ ಎಂದು ಸಂತ್ರಸ್ಥೆ ಸ್ನೇಹಿತ ಹೇಳಿಕೆ ನೀಡಿದ್ದಾರೆ.</p>.<p>ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಮಂಗಳವಾರ ರಾತ್ರಿ ಸುಮಾರು 7.30ರ ವೇಳೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ವಿಚಾರ ಬುಧವಾರ ಬಹಿರಂಗಗೊಂಡಿತ್ತು. ಪ್ರಕರಣ ಇಡೀ ದೇಶದ ಗಮನ ಸೆಳೆದಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.</p>.<p>ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅನುಮಾನಗೊಂಡಿದ್ದು, ಅವರ ಹುಡುಕಾಟ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>