<p><strong>ಹೆತ್ತೂರು (ಸಕಲೇಶಪುರ ತಾಲ್ಲೂಕು):</strong> ಸಮೀಪದ ಯಸಳೂರು ಹೋಬಳಿ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ವಾರಗಳಿಂದ ಜಾನುವಾರುಗಳು ನಿಗೂಢ ಕಾಯಿಲೆಯಿಂದ ಸಾವಿಗೀಡಾಗುತ್ತಿದ್ದು, ಪಶು ವೈದ್ಯಾಧಿಕಾರಿಗಳಿಗೂ ಕಾರಣ ತಿಳಿದಿಲ್ಲ.</p>.<p>ಐಗೂರು ಪಂಚಾಯಿತಿ ವ್ಯಾಪ್ತಿಯ ಯಡಿಕೆರೆಯಲ್ಲಿ 8, ಚಿಕ್ಕಲ್ಲೂರಿನಲ್ಲಿ 14, ಕುಂಬಾರಗೇರಿಯಲ್ಲಿ 6 ದನ–ಕರು ಗಳು ಸೇರಿ 40 ಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿವೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಾಧಿಕಾರಿ ವೆಂಕಟೇಶ್, ‘ಪ್ರಯೋಗಾಲಯದಿಂದ ಒಂದೆರಡು ದಿನಗಳಲ್ಲಿ ವರದಿ ಬರಲಿದ್ದು, ನಿಖರ ಕಾರಣ ತಿಳಿಯಲಿದೆ. ನಂತರ ಇತರ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು’ ಎಂದು ಹೇಳಿದರು.</p>.<p>‘ಕೆಲವರು ಜಾನುವಾರುಗಳ ಕಳೇಬರವನ್ನು ನೀರಿನಲ್ಲಿ ಬಿಸಾಡುವುದರಿಂದ ಬದುಕಿರುವ ಜಾನುವಾರುಗಳಿಗೆ ರೋಗ ಹರಡುವ ಸಾಧ್ಯತೆ ಇದೆ. ಕಡ್ಡಾಯವಾಗಿ 10 ಅಡಿ ಆಳದ ಗುಂಡಿ ತೆಗೆದು ಜಾನುವಾರು ಹೂಳಬೇಕು’ ಎಂದರು.</p>.<p>ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ‘ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಜಾನುವಾರುಗಳ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು (ಸಕಲೇಶಪುರ ತಾಲ್ಲೂಕು):</strong> ಸಮೀಪದ ಯಸಳೂರು ಹೋಬಳಿ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ವಾರಗಳಿಂದ ಜಾನುವಾರುಗಳು ನಿಗೂಢ ಕಾಯಿಲೆಯಿಂದ ಸಾವಿಗೀಡಾಗುತ್ತಿದ್ದು, ಪಶು ವೈದ್ಯಾಧಿಕಾರಿಗಳಿಗೂ ಕಾರಣ ತಿಳಿದಿಲ್ಲ.</p>.<p>ಐಗೂರು ಪಂಚಾಯಿತಿ ವ್ಯಾಪ್ತಿಯ ಯಡಿಕೆರೆಯಲ್ಲಿ 8, ಚಿಕ್ಕಲ್ಲೂರಿನಲ್ಲಿ 14, ಕುಂಬಾರಗೇರಿಯಲ್ಲಿ 6 ದನ–ಕರು ಗಳು ಸೇರಿ 40 ಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿವೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯಾಧಿಕಾರಿ ವೆಂಕಟೇಶ್, ‘ಪ್ರಯೋಗಾಲಯದಿಂದ ಒಂದೆರಡು ದಿನಗಳಲ್ಲಿ ವರದಿ ಬರಲಿದ್ದು, ನಿಖರ ಕಾರಣ ತಿಳಿಯಲಿದೆ. ನಂತರ ಇತರ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು’ ಎಂದು ಹೇಳಿದರು.</p>.<p>‘ಕೆಲವರು ಜಾನುವಾರುಗಳ ಕಳೇಬರವನ್ನು ನೀರಿನಲ್ಲಿ ಬಿಸಾಡುವುದರಿಂದ ಬದುಕಿರುವ ಜಾನುವಾರುಗಳಿಗೆ ರೋಗ ಹರಡುವ ಸಾಧ್ಯತೆ ಇದೆ. ಕಡ್ಡಾಯವಾಗಿ 10 ಅಡಿ ಆಳದ ಗುಂಡಿ ತೆಗೆದು ಜಾನುವಾರು ಹೂಳಬೇಕು’ ಎಂದರು.</p>.<p>ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ‘ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಜಾನುವಾರುಗಳ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>