<p><strong>ಮೈಸೂರು:</strong> ‘ ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ರೈಲುಗಳ ಗರಿಷ್ಠ ವೇಗವನ್ನು 110 ರಿಂದ 135 ಕಿ.ಮೀ.ಗೆ ಹೆಚ್ಚಿಸಿದ್ದು, ಇದರಿಂದ ಈ ಎರಡು ನಗರಗಳ ನಡುವಿನ ಪ್ರಯಾಣದ ಅವಧಿ ಒಂದು ಗಂಟೆಗೆ ಇಳಿಯಲಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>‘ ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರಿನಂತಹ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ರಾಜಧಾನಿಯಿಂದ ಮೈಸೂರಿಗೆ ಸದ್ಯದಲ್ಲೇ ಇನ್ನೂ ಎರಡು ಮೆಮು ರೈಲುಗಳು ಸಂಚರಿಸಲಿವೆ’ ಎಂದರು.</p>.ಸಿದ್ದರಾಮಯ್ಯ ಅವರಷ್ಟು ಸೋಮಾರಿ ನಾನಲ್ಲ: ಸೋಮಣ್ಣ ತಿರುಗೇಟು.ರೈಲ್ವೆ ಮಾರ್ಗ ಯೋಜನೆಗೆ ಹಣವಿಲ್ಲವೆಂದು ಪತ್ರ ಬರೆದ ಸಿಎಂ: ವಿ.ಸೋಮಣ್ಣ ಆರೋಪ. <p><strong>ರೈಲ್ವೆ ಯೋಜನೆಗಳಿಗೆ ಅಡ್ಡಿ:</strong> </p><p>‘ರಾಜ್ಯ ಸರ್ಕಾರ ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ಸೇರಿದಂತೆ ಅಗತ್ಯ ನೆರವು ನೀಡದೇ ಅಡ್ಡಗಾಲು ಹಾಕುತ್ತಿದೆ’ ಎಂದು ಸೋಮಣ್ಣ ದೂರಿದರು. </p><p>‘ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಚಾಮರಾಜನಗರದವರೆಗೆ 142 ಕಿ.ಮೀ. ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ₹1200 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿತ್ತು. ಆದರೆ 2024ರ ಡಿಸೆಂಬರ್ನಲ್ಲಿ ಪತ್ರ ಬರೆದ ರಾಜ್ಯ ಸರ್ಕಾರ, ಯೋಜನೆಗೆ ಸಹಕಾರ ನೀಡಲು ನಿರಾಕರಿಸಿದೆ’ ಎಂದರು. ‘ ಮೈಸೂರು–ಕುಶಾಲನಗರ ಮಾರ್ಗ ನಿರ್ಮಾಣಕ್ಕೂ ಸಹಕಾರ ನೀಡುತ್ತಿಲ್ಲ. ಆದಾಗ್ಯೂ ಇಲಾಖೆಯು ಯೋಜನೆ ಮುಂದುವರಿಸಲಿದೆ’ ಎಂದರು.</p><p>‘ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17 ಬಾರಿ ಬಜೆಟ್ ಮಂಡಿಸಿದ್ದರೂ ರಾಜ್ಯಕ್ಕೆ ಏನು ಕೊಡುಗೆ ನೀಡಿಲ್ಲ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಹಳ್ಳ ಹಿಡಿದಿದೆ. ಆದರೆ ಅನಿರೀಕ್ಷಿತವಾಗಿ ಸಂಸದರಾಗಿ, ಕೇಂದ್ರ ಸಚಿವರೂ ಆದ ನಾನು ಹಾಗೂ ಎಚ್.ಡಿ. ಕುಮಾರಸ್ವಾಮಿ ಸಾಕಷ್ಟು ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ₹52 ಸಾವಿರ ಕೋಟಿ ವೆಚ್ಚದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, ಕಳೆದ ಹತ್ತು ವರ್ಷದಲ್ಲಿ 1750 ಕಿ.ಮೀ. ಉದ್ದದ ಹೊಸ ಹಳಿಗಳನ್ನು ನಿರ್ಮಿಸಲಾಗಿದೆ. ₹1900 ಕೋಟಿ ವೆಚ್ಚದಲ್ಲಿ 61 ಅಮೃತ ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು. </p><p>‘ ಮಂಗಳೂರು–ಕುಕ್ಕೆ ಸುಬ್ರಹ್ಮಣ್ಯ ನಡುವಿನ 51 ಕಿ.ಮೀ. ಪ್ರಯಾಸದ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಿದ್ದು ನಮ್ಮ ಸಾಧನೆ. ₹6 ಸಾವಿರ ಕೋಟಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಕೇಂದ್ರ ನಿರ್ಮಾಣಕ್ಕೂ ಯೋಜನೆ ರೂಪಿಸಿದ್ದೇವೆ’ ಎಂದರು. </p><p><strong>ಸೇತುವೆ ನಿರ್ಮಾಣಕ್ಕೆ ಒತ್ತು:</strong> </p><p>‘ ಕಳೆದ ಹತ್ತು ವರ್ಷದಲ್ಲಿ ರಾಜ್ಯದಲ್ಲಿ 707 ಹೊಸ ರೈಲ್ವೆ ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲೆಲ್ಲ ನಿರ್ಮಾಣಕ್ಕೆ ಸೂಚಿಸಿದ್ದು, ವೆಚ್ಚವನ್ನು ಕೇಂದ್ರವೇ ಭರಿಸಲಿದೆ’ ಎಂದರು. </p><p><strong>ಉಪ ಚುನಾವಣೆಗಳಿಂದ ಸಂದೇಶ:</strong> </p><p>‘ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ಹೋಗಲಿದೆ. ಎರಡೂ ಕಡೆ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಅಲ್ಪಸಂಖ್ಯಾತರ ತೀರ್ಮಾನ ಹಾಗೆಯೇ ಇದ್ದರೆ ಮುಂದೆ ಕಾಂಗ್ರೆಸ್ ಚುನಾವಣೆಗೆ ಬರುವುದೇ ಅನುಮಾನ’ ಎಂದರು.</p><p>ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇದ್ದರು. ಬಳಿಕ ಸಚಿವದ್ವಯರು ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. </p><p><strong>ಐದು ತಾಸು ಪ್ರಯಾಣ; 8 ನಿಲ್ದಾಣಕ್ಕೆ ಭೇಟಿ</strong></p><p>ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ, ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಒಳಗೊಂಡ ತಂಡವು ಗುರುವಾರ ವಿಶೇಷ ರೈಲಿನಲ್ಲಿ ಬೆಂಗಳೂರು–ಮೈಸೂರು ನಡುವೆ ಪ್ರಯಾಣಿಸಿತು. </p><p>ಬೆಳಿಗ್ಗೆ 10ಕ್ಕೆ ಬೆಂಗಳೂರು ಕೆಎಸ್ಆರ್ ನಿಲ್ದಾಣದಿಂದ ಆರಂಭಗೊಂಡ ಪ್ರಯಾಣವು ಮಧ್ಯಾಹ್ನ 2.45ರ ವೇಳೆಗೆ ಮೈಸೂರಿನಲ್ಲಿ ಮುಕ್ತಾಯಗೊಂಡಿತು. ನಡುವೆ ಎಂಟು ನಿಲ್ದಾಣಗಳಿಗೆ ಭೇಟಿ ಕೊಟ್ಟು ಜನರ ಅಹವಾಲು ಆಲಿಸಿತು. ನಿಲ್ದಾಣದಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿತು. </p><p>‘ನಿಲ್ದಾಣಗಳಿಗೆ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ್ದೇವೆ. ಕೆಲವೆಡೆ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಂದ ಒಂದೆರಡು ಕಡೆ ತೊಂದರೆ ಆಗಿದ್ದು, ಸದ್ಯದಲ್ಲೇ ಸರಿಹೋಗಲಿದೆ’ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ರೈಲುಗಳ ಗರಿಷ್ಠ ವೇಗವನ್ನು 110 ರಿಂದ 135 ಕಿ.ಮೀ.ಗೆ ಹೆಚ್ಚಿಸಿದ್ದು, ಇದರಿಂದ ಈ ಎರಡು ನಗರಗಳ ನಡುವಿನ ಪ್ರಯಾಣದ ಅವಧಿ ಒಂದು ಗಂಟೆಗೆ ಇಳಿಯಲಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>‘ ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರಿನಂತಹ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ರಾಜಧಾನಿಯಿಂದ ಮೈಸೂರಿಗೆ ಸದ್ಯದಲ್ಲೇ ಇನ್ನೂ ಎರಡು ಮೆಮು ರೈಲುಗಳು ಸಂಚರಿಸಲಿವೆ’ ಎಂದರು.</p>.ಸಿದ್ದರಾಮಯ್ಯ ಅವರಷ್ಟು ಸೋಮಾರಿ ನಾನಲ್ಲ: ಸೋಮಣ್ಣ ತಿರುಗೇಟು.ರೈಲ್ವೆ ಮಾರ್ಗ ಯೋಜನೆಗೆ ಹಣವಿಲ್ಲವೆಂದು ಪತ್ರ ಬರೆದ ಸಿಎಂ: ವಿ.ಸೋಮಣ್ಣ ಆರೋಪ. <p><strong>ರೈಲ್ವೆ ಯೋಜನೆಗಳಿಗೆ ಅಡ್ಡಿ:</strong> </p><p>‘ರಾಜ್ಯ ಸರ್ಕಾರ ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ಸೇರಿದಂತೆ ಅಗತ್ಯ ನೆರವು ನೀಡದೇ ಅಡ್ಡಗಾಲು ಹಾಕುತ್ತಿದೆ’ ಎಂದು ಸೋಮಣ್ಣ ದೂರಿದರು. </p><p>‘ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಚಾಮರಾಜನಗರದವರೆಗೆ 142 ಕಿ.ಮೀ. ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ₹1200 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿತ್ತು. ಆದರೆ 2024ರ ಡಿಸೆಂಬರ್ನಲ್ಲಿ ಪತ್ರ ಬರೆದ ರಾಜ್ಯ ಸರ್ಕಾರ, ಯೋಜನೆಗೆ ಸಹಕಾರ ನೀಡಲು ನಿರಾಕರಿಸಿದೆ’ ಎಂದರು. ‘ ಮೈಸೂರು–ಕುಶಾಲನಗರ ಮಾರ್ಗ ನಿರ್ಮಾಣಕ್ಕೂ ಸಹಕಾರ ನೀಡುತ್ತಿಲ್ಲ. ಆದಾಗ್ಯೂ ಇಲಾಖೆಯು ಯೋಜನೆ ಮುಂದುವರಿಸಲಿದೆ’ ಎಂದರು.</p><p>‘ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17 ಬಾರಿ ಬಜೆಟ್ ಮಂಡಿಸಿದ್ದರೂ ರಾಜ್ಯಕ್ಕೆ ಏನು ಕೊಡುಗೆ ನೀಡಿಲ್ಲ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಹಳ್ಳ ಹಿಡಿದಿದೆ. ಆದರೆ ಅನಿರೀಕ್ಷಿತವಾಗಿ ಸಂಸದರಾಗಿ, ಕೇಂದ್ರ ಸಚಿವರೂ ಆದ ನಾನು ಹಾಗೂ ಎಚ್.ಡಿ. ಕುಮಾರಸ್ವಾಮಿ ಸಾಕಷ್ಟು ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ₹52 ಸಾವಿರ ಕೋಟಿ ವೆಚ್ಚದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, ಕಳೆದ ಹತ್ತು ವರ್ಷದಲ್ಲಿ 1750 ಕಿ.ಮೀ. ಉದ್ದದ ಹೊಸ ಹಳಿಗಳನ್ನು ನಿರ್ಮಿಸಲಾಗಿದೆ. ₹1900 ಕೋಟಿ ವೆಚ್ಚದಲ್ಲಿ 61 ಅಮೃತ ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು. </p><p>‘ ಮಂಗಳೂರು–ಕುಕ್ಕೆ ಸುಬ್ರಹ್ಮಣ್ಯ ನಡುವಿನ 51 ಕಿ.ಮೀ. ಪ್ರಯಾಸದ ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಿದ್ದು ನಮ್ಮ ಸಾಧನೆ. ₹6 ಸಾವಿರ ಕೋಟಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಕೇಂದ್ರ ನಿರ್ಮಾಣಕ್ಕೂ ಯೋಜನೆ ರೂಪಿಸಿದ್ದೇವೆ’ ಎಂದರು. </p><p><strong>ಸೇತುವೆ ನಿರ್ಮಾಣಕ್ಕೆ ಒತ್ತು:</strong> </p><p>‘ ಕಳೆದ ಹತ್ತು ವರ್ಷದಲ್ಲಿ ರಾಜ್ಯದಲ್ಲಿ 707 ಹೊಸ ರೈಲ್ವೆ ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲೆಲ್ಲ ನಿರ್ಮಾಣಕ್ಕೆ ಸೂಚಿಸಿದ್ದು, ವೆಚ್ಚವನ್ನು ಕೇಂದ್ರವೇ ಭರಿಸಲಿದೆ’ ಎಂದರು. </p><p><strong>ಉಪ ಚುನಾವಣೆಗಳಿಂದ ಸಂದೇಶ:</strong> </p><p>‘ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ಹೋಗಲಿದೆ. ಎರಡೂ ಕಡೆ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಅಲ್ಪಸಂಖ್ಯಾತರ ತೀರ್ಮಾನ ಹಾಗೆಯೇ ಇದ್ದರೆ ಮುಂದೆ ಕಾಂಗ್ರೆಸ್ ಚುನಾವಣೆಗೆ ಬರುವುದೇ ಅನುಮಾನ’ ಎಂದರು.</p><p>ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇದ್ದರು. ಬಳಿಕ ಸಚಿವದ್ವಯರು ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. </p><p><strong>ಐದು ತಾಸು ಪ್ರಯಾಣ; 8 ನಿಲ್ದಾಣಕ್ಕೆ ಭೇಟಿ</strong></p><p>ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ, ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಒಳಗೊಂಡ ತಂಡವು ಗುರುವಾರ ವಿಶೇಷ ರೈಲಿನಲ್ಲಿ ಬೆಂಗಳೂರು–ಮೈಸೂರು ನಡುವೆ ಪ್ರಯಾಣಿಸಿತು. </p><p>ಬೆಳಿಗ್ಗೆ 10ಕ್ಕೆ ಬೆಂಗಳೂರು ಕೆಎಸ್ಆರ್ ನಿಲ್ದಾಣದಿಂದ ಆರಂಭಗೊಂಡ ಪ್ರಯಾಣವು ಮಧ್ಯಾಹ್ನ 2.45ರ ವೇಳೆಗೆ ಮೈಸೂರಿನಲ್ಲಿ ಮುಕ್ತಾಯಗೊಂಡಿತು. ನಡುವೆ ಎಂಟು ನಿಲ್ದಾಣಗಳಿಗೆ ಭೇಟಿ ಕೊಟ್ಟು ಜನರ ಅಹವಾಲು ಆಲಿಸಿತು. ನಿಲ್ದಾಣದಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿತು. </p><p>‘ನಿಲ್ದಾಣಗಳಿಗೆ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ್ದೇವೆ. ಕೆಲವೆಡೆ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಂದ ಒಂದೆರಡು ಕಡೆ ತೊಂದರೆ ಆಗಿದ್ದು, ಸದ್ಯದಲ್ಲೇ ಸರಿಹೋಗಲಿದೆ’ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>