<p>ಮೈಸೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಆ ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಆರ್. ರಘು (ಕೌಟಿಲ್ಯ) ಅವರ ನಿರೂಪಣೆ ಮತ್ತು ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.</p>.<p>ಯಡಿಯೂರಪ್ಪ ಅವರ ಬದುಕಿನ ಮೈಲುಗಲ್ಲುಗಳನ್ನು ಸಾರುವ ‘ಕೆಂದಾವರೆ- ಕಮಲ ಅರಳಿದ ಕಥೆ’ ಹಾಗೂ ಅವರ ಸುದೀರ್ಘ ಶಾಸಕತ್ವದ ಅವಧಿಯಲ್ಲಿ ಸದನದಲ್ಲಿ ಮಾಡಿದ ಭಾಷಣಗಳ ಸಂಗ್ರಹ ಒಳಗೊಂಡ ‘ಸದನ ಶಿಕಾರಿ-ಯಡಿಯೂರಪ್ಪನವರ ಗುಡುಗಿನ ನುಡಿಗಳು’ ಕೃತಿಗಳನ್ನು ಈಚೆಗೆ ಚಿತ್ರದುರ್ಗದಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಡುಗಡೆ ಮಾಡಿದರು.</p>.<p>ರಂಭಾಪುರಿ ಶ್ರೀಗಳು, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಸಿ.ಟಿ. ರವಿ, ತಮ್ಮೇಶ್ ಗೌಡ, ಆರ್. ರಘು, ರೇವಯ್ಯ ಒಡೆಯರ್ ಪಾಲ್ಗೊಂಡಿದ್ದರು.</p>.<p>‘ಸದನ ಶಿಕಾರಿ…’ ಕೃತಿಯನ್ನು ರೇವಯ್ಯ ಒಡೆಯರ್ ಸಂಪಾದಿಸಿದ್ದಾರೆ. ‘ಈ ಕೃತಿಗಳು ಅವರ ಅಭಿಮಾನಿಗಳಿಗೆ, ಹಿತೈಷಿಗಳಿಗೆ ಮಾತ್ರವಲ್ಲ, ಸಾರ್ವಜನಿಕ ಕ್ಷೇತ್ರದ ಪ್ರತಿಯೊಬ್ಬರಿಗೂ, ಆಸಕ್ತಿಕರ ಮಾಹಿತಿಯುಕ್ತ, ಸಂಗ್ರಹ ಯೋಗ್ಯವಾಗಿವೆ. ಆಸಕ್ತರು ಓದಿ, ಪ್ರೇರಣೆ ಪಡೆದಲ್ಲಿ ಕೃತಿಗಳು ಸಾರ್ಥಕತೆ ಪಡೆಯುತ್ತವೆ’ ಎಂದು ಎಂದು ರಘು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-39-1646945832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಆ ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಆರ್. ರಘು (ಕೌಟಿಲ್ಯ) ಅವರ ನಿರೂಪಣೆ ಮತ್ತು ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.</p>.<p>ಯಡಿಯೂರಪ್ಪ ಅವರ ಬದುಕಿನ ಮೈಲುಗಲ್ಲುಗಳನ್ನು ಸಾರುವ ‘ಕೆಂದಾವರೆ- ಕಮಲ ಅರಳಿದ ಕಥೆ’ ಹಾಗೂ ಅವರ ಸುದೀರ್ಘ ಶಾಸಕತ್ವದ ಅವಧಿಯಲ್ಲಿ ಸದನದಲ್ಲಿ ಮಾಡಿದ ಭಾಷಣಗಳ ಸಂಗ್ರಹ ಒಳಗೊಂಡ ‘ಸದನ ಶಿಕಾರಿ-ಯಡಿಯೂರಪ್ಪನವರ ಗುಡುಗಿನ ನುಡಿಗಳು’ ಕೃತಿಗಳನ್ನು ಈಚೆಗೆ ಚಿತ್ರದುರ್ಗದಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಡುಗಡೆ ಮಾಡಿದರು.</p>.<p>ರಂಭಾಪುರಿ ಶ್ರೀಗಳು, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಸಿ.ಟಿ. ರವಿ, ತಮ್ಮೇಶ್ ಗೌಡ, ಆರ್. ರಘು, ರೇವಯ್ಯ ಒಡೆಯರ್ ಪಾಲ್ಗೊಂಡಿದ್ದರು.</p>.<p>‘ಸದನ ಶಿಕಾರಿ…’ ಕೃತಿಯನ್ನು ರೇವಯ್ಯ ಒಡೆಯರ್ ಸಂಪಾದಿಸಿದ್ದಾರೆ. ‘ಈ ಕೃತಿಗಳು ಅವರ ಅಭಿಮಾನಿಗಳಿಗೆ, ಹಿತೈಷಿಗಳಿಗೆ ಮಾತ್ರವಲ್ಲ, ಸಾರ್ವಜನಿಕ ಕ್ಷೇತ್ರದ ಪ್ರತಿಯೊಬ್ಬರಿಗೂ, ಆಸಕ್ತಿಕರ ಮಾಹಿತಿಯುಕ್ತ, ಸಂಗ್ರಹ ಯೋಗ್ಯವಾಗಿವೆ. ಆಸಕ್ತರು ಓದಿ, ಪ್ರೇರಣೆ ಪಡೆದಲ್ಲಿ ಕೃತಿಗಳು ಸಾರ್ಥಕತೆ ಪಡೆಯುತ್ತವೆ’ ಎಂದು ಎಂದು ರಘು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-39-1646945832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>