<p>ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಿಯಲ್ ಎಸ್ಟೇಟ್ ಏಜೆಂಟ್’ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ಮುಖಂಡರು ಪುರಭವನದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟಿಸಿದರು.</p>.<p>ಮೈಸೂರು ನಗರ ಕಾಂಗ್ರೆಸ್ ವಕ್ತಾರ ರಾಜೇಶ್ ಮಾತನಾಡಿ, ‘ಎಚ್.ಡಿ.ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲು ಯತ್ನಿಸಿದ್ದರು. ರಾಮನಗರ ಭಾಗದಲ್ಲಿ 5 ಟೌನ್ಶಿಪ್ ಮಾಡಲು ಮುಂದಾಗಿದ್ದ ಇವರಿಗೆ, ರೈತರ ಜಮೀನು ಫಲವತ್ತಾಗಿದೆ ಎಂಬ ಅರಿವು ಇರಲಿಲ್ಲವೇ? ರೈತರಿಗೆ ಅನಾನುಕೂಲ ಆಗುತ್ತಿದೆ ಎಂಬ ಕಾಳಜಿ ಇರಲಿಲ್ಲವೇ? ಆಗ ಅವರು ರಿಯಲ್ ಎಸ್ಟೇಟ್ ಮಾಡಲು ಹೊರಟಿದ್ದರೇ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಈ ಯೋಜನೆಗೆ ₹ 18 ಸಾವಿರ ಕೋಟಿ ಮೀಸಲಿಟ್ಟಿದೆ. ಈ ಯೋಜನೆಯಿಂದ ಬೆಂಗಳೂರಿನ ವಾಹನ ಸಂಚಾರ ದಟ್ಟಣೆ ಹಾಗೂ ಮೂಲಸೌಕರ್ಯ, ರಾಮನಗರ ಗ್ರಾಮಾಂತರ ಭಾಗಕ್ಕೆ ರಸ್ತೆ, ಒಳಚರಂಡಿ, ಯುಜಿಡಿಯಾಗಲಿದ್ದು. ರೈತರಿಗೆ ಅನುಕೂಲಕರ ಯೋಜನೆಯಾಗಲಿದೆ. ಮೈಸೂರು- ಬಿಡದಿ ಹೆದ್ದಾರಿಯಲ್ಲಿ 7,400 ಎಕರೆ ಪ್ರದೇಶದಲ್ಲಿ ಟೌನ್ಶಿಪ್ ಮಾಡುತ್ತಿರುವುದರಿಂದ, ಮೈಸೂರು, ಮಂಡ್ಯ, ರಾಮನಗರ, ನಗರ ಪ್ರದೇಶಗಳ ಅಭಿವೃದ್ದಿಗೆ ಪೂರಕವಾಗಿದೆ. ಆದರೆ, ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>ಮುಖಂಡರಾದ ರಾಜಶೇಖರ್, ಮಹೇಶ್, ಸುನಿಲ್, ನಾರಾಯಣ, ಸೈಯದ್ ಫಾರೂಕ್, ಪ್ರಕಾಶ್, ಧನಂಜಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-39-2077955597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಿಯಲ್ ಎಸ್ಟೇಟ್ ಏಜೆಂಟ್’ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ಮುಖಂಡರು ಪುರಭವನದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟಿಸಿದರು.</p>.<p>ಮೈಸೂರು ನಗರ ಕಾಂಗ್ರೆಸ್ ವಕ್ತಾರ ರಾಜೇಶ್ ಮಾತನಾಡಿ, ‘ಎಚ್.ಡಿ.ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲು ಯತ್ನಿಸಿದ್ದರು. ರಾಮನಗರ ಭಾಗದಲ್ಲಿ 5 ಟೌನ್ಶಿಪ್ ಮಾಡಲು ಮುಂದಾಗಿದ್ದ ಇವರಿಗೆ, ರೈತರ ಜಮೀನು ಫಲವತ್ತಾಗಿದೆ ಎಂಬ ಅರಿವು ಇರಲಿಲ್ಲವೇ? ರೈತರಿಗೆ ಅನಾನುಕೂಲ ಆಗುತ್ತಿದೆ ಎಂಬ ಕಾಳಜಿ ಇರಲಿಲ್ಲವೇ? ಆಗ ಅವರು ರಿಯಲ್ ಎಸ್ಟೇಟ್ ಮಾಡಲು ಹೊರಟಿದ್ದರೇ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಈ ಯೋಜನೆಗೆ ₹ 18 ಸಾವಿರ ಕೋಟಿ ಮೀಸಲಿಟ್ಟಿದೆ. ಈ ಯೋಜನೆಯಿಂದ ಬೆಂಗಳೂರಿನ ವಾಹನ ಸಂಚಾರ ದಟ್ಟಣೆ ಹಾಗೂ ಮೂಲಸೌಕರ್ಯ, ರಾಮನಗರ ಗ್ರಾಮಾಂತರ ಭಾಗಕ್ಕೆ ರಸ್ತೆ, ಒಳಚರಂಡಿ, ಯುಜಿಡಿಯಾಗಲಿದ್ದು. ರೈತರಿಗೆ ಅನುಕೂಲಕರ ಯೋಜನೆಯಾಗಲಿದೆ. ಮೈಸೂರು- ಬಿಡದಿ ಹೆದ್ದಾರಿಯಲ್ಲಿ 7,400 ಎಕರೆ ಪ್ರದೇಶದಲ್ಲಿ ಟೌನ್ಶಿಪ್ ಮಾಡುತ್ತಿರುವುದರಿಂದ, ಮೈಸೂರು, ಮಂಡ್ಯ, ರಾಮನಗರ, ನಗರ ಪ್ರದೇಶಗಳ ಅಭಿವೃದ್ದಿಗೆ ಪೂರಕವಾಗಿದೆ. ಆದರೆ, ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>ಮುಖಂಡರಾದ ರಾಜಶೇಖರ್, ಮಹೇಶ್, ಸುನಿಲ್, ನಾರಾಯಣ, ಸೈಯದ್ ಫಾರೂಕ್, ಪ್ರಕಾಶ್, ಧನಂಜಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-39-2077955597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>