<p><strong>ಬೆಂಗಳೂರು</strong>: ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ(ಏರ್ ಶೋ) ಆಯೋಜಿಸಲು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.</p><p>ಅಲ್ಲದೇ, ದಸರಾದಲ್ಲಿ ಪಾಲ್ಗೊಳ್ಳುವಂತೆ ರಾಜನಾಥ ಸಿಂಗ್ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.</p><p>‘ವೈಮಾನಿಕ ಪ್ರದರ್ಶನವು ಐತಿಹಾಸಿಕ ಉತ್ಸವದ ಭವ್ಯತೆಗೆ ಹೆಚ್ಚಿನ ಮೆರಗು ನೀಡುವುದಲ್ಲದೇ ದಸರಾ ನೋಡಲು ಬರುವ ಲಕ್ಷಾಂತರ ಜನರಲ್ಲಿ ದೇಶಭಕ್ತಿಯ ಭಾವವನ್ನು ತುಂಬುತ್ತದೆ’ ಎಂದು ತಮ್ಮ ಹೇಳಿಕೆಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.</p><p>‘ನೀವು(ರಾಜನಾಥ ಸಿಂಗ್) ಈ ಕಾರ್ಯಕ್ರಮದಲ್ಲಿ ಭಾಗಿಯಾದರೆ ಅದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ. ನಿಮ್ಮ ಉಪಸ್ಥಿತಿಯು ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಗೌರವ ಮತ್ತು ಮೆಚ್ಚುಗೆಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಹೇಳಿದ್ದಾರೆ.</p><p>ಏರ್ ಶೋ ಯಾವಾಗ ಮತ್ತು ಎಲ್ಲಿ ನಡೆಸಬೇಕೆಂಬ ಬಗ್ಗೆ ಇನ್ನು ನಿಗದಿಯಾಗಿಲ್ಲ.</p><p>ದಸರಾದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆ ಕೋರಿ ಕಳೆದ ತಿಂಗಳು ರಾಜನಾಥ ಸಿಂಗ್ ಅವರನ್ನು ಖುದ್ದು ಭೇಟಿ ಮಾಡಿ ಸಿದ್ದರಾಮಯ್ಯ ಮನವಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ(ಏರ್ ಶೋ) ಆಯೋಜಿಸಲು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.</p><p>ಅಲ್ಲದೇ, ದಸರಾದಲ್ಲಿ ಪಾಲ್ಗೊಳ್ಳುವಂತೆ ರಾಜನಾಥ ಸಿಂಗ್ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.</p><p>‘ವೈಮಾನಿಕ ಪ್ರದರ್ಶನವು ಐತಿಹಾಸಿಕ ಉತ್ಸವದ ಭವ್ಯತೆಗೆ ಹೆಚ್ಚಿನ ಮೆರಗು ನೀಡುವುದಲ್ಲದೇ ದಸರಾ ನೋಡಲು ಬರುವ ಲಕ್ಷಾಂತರ ಜನರಲ್ಲಿ ದೇಶಭಕ್ತಿಯ ಭಾವವನ್ನು ತುಂಬುತ್ತದೆ’ ಎಂದು ತಮ್ಮ ಹೇಳಿಕೆಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.</p><p>‘ನೀವು(ರಾಜನಾಥ ಸಿಂಗ್) ಈ ಕಾರ್ಯಕ್ರಮದಲ್ಲಿ ಭಾಗಿಯಾದರೆ ಅದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ. ನಿಮ್ಮ ಉಪಸ್ಥಿತಿಯು ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಗೌರವ ಮತ್ತು ಮೆಚ್ಚುಗೆಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಹೇಳಿದ್ದಾರೆ.</p><p>ಏರ್ ಶೋ ಯಾವಾಗ ಮತ್ತು ಎಲ್ಲಿ ನಡೆಸಬೇಕೆಂಬ ಬಗ್ಗೆ ಇನ್ನು ನಿಗದಿಯಾಗಿಲ್ಲ.</p><p>ದಸರಾದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆ ಕೋರಿ ಕಳೆದ ತಿಂಗಳು ರಾಜನಾಥ ಸಿಂಗ್ ಅವರನ್ನು ಖುದ್ದು ಭೇಟಿ ಮಾಡಿ ಸಿದ್ದರಾಮಯ್ಯ ಮನವಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>