<p><strong>ಕಲಬುರಗಿ</strong>: ‘ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾ ಉತ್ಸವ ನಮ್ಮ ಸಂಸ್ಕೃತಿ, ಪರಂಪರೆಯ ಪ್ರತಿರೂಪ. ಇಂತಹ ಸಂದರ್ಭಗಳಲ್ಲಿ ಜಾತಿ-ಧರ್ಮದ ಭೇದಭಾವದ ಬೀಜ ಬಿತ್ತುವ ಬಿಜೆಪಿ ನಿಲುವು ಖಂಡನೀಯ’ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಟೀಕಿಸಿದ್ದಾರೆ.</p><p>‘ದಸರಾ ಉತ್ಸವದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಹ್ವಾನಿಸಿರುವುದು ಹಾಗೂ ಅವರು ಅದನ್ನು ಒಪ್ಪಿಕೊಂಡಿರುವುದು ಅತ್ಯಂತ ಸ್ವಾಗತಾರ್ಹ. ಬಾನು ಮುಷ್ತಾಕ್ ಅವರು ಜಾಗತಿಕಮಟ್ಟದಲ್ಲಿ ಬುಕರ್ ಪ್ರಶಸ್ತಿ ಪಡೆದು ಕರ್ನಾಟಕದ ಗೌರವವನ್ನು ಜಗತ್ತಿನ ವೇದಿಕೆಯಲ್ಲಿ ಎತ್ತಿಹಿಡಿದಿದ್ದಾರೆ. ಆದರೆ, ಯಾವತ್ತೂ ಶಾಂತಿ-ಸೌಹಾರ್ದ ಬಯಸದ ಬಿಜೆಪಿ, ಅನಾವಶ್ಯಕ ಧಾರ್ಮಿಕ ವಿಷಯಗಳನ್ನು ಎಳೆದು ತಂದು ಒಂದು ಸಮುದಾಯಕ್ಕೆ ಅವಮಾನ ಮಾಡುತ್ತಿರುವುದು ತೀವ್ರ ಖಂಡನೀಯ. ಪ್ರತಿಯೊಬ್ಬರಿಗೂ ತಮ್ಮ ನಂಬಿಕೆ-ಆಚಾರಗಳನ್ನು ಪಾಲಿಸುವ ಹಕ್ಕು ಸಂವಿಧಾನದಲ್ಲೇ ಇದೆ. ಈ ಹಿಂದೆ ನಾಡಿನ ಖ್ಯಾತ ಕವಿ ಕೆ.ಎಸ್.ನಿಸಾರ್ಅಹ್ಮದ್ ಅವರು ದಸರಾ ಉತ್ಸವ ಉದ್ಘಾಟಿಸಿದ್ದು ಇವರಿಗೆ ನೆನಪಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.</p><p>‘ಬಿಜೆಪಿಯ ಇಂಥ ಹೇಳಿಕೆಗಳಿಂದ ಕನ್ನಡದ ಸಾಂಸ್ಕೃತಿಕ ಲೋಕಕ್ಕೆ ಅವಮಾನವಾಗುತ್ತದೆ. ನಾಡಿನಲ್ಲಿ ಮಳೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು ಹಾಗೂ ಬಡ ಮಕ್ಕಳ ಶಿಕ್ಷಣ, ದಲಿತರ, ಕಾರ್ಮಿಕರು ಹಾಗೂ ಹಿಂದುಳಿದವರ ಸಮಸ್ಯೆಗಳ ಬಗ್ಗೆ ಮೌನವಾಗಿರುವ ಬಿಜೆಪಿ, ಜಾತಿ-ಧರ್ಮದ ರಾಜಕೀಯದ ಸುತ್ತ ಮಾತ್ರ ತಿರುಗಾಡುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಸಾರ್ವಜನಿಕರು ಇದನ್ನು ತಿರಸ್ಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾ ಉತ್ಸವ ನಮ್ಮ ಸಂಸ್ಕೃತಿ, ಪರಂಪರೆಯ ಪ್ರತಿರೂಪ. ಇಂತಹ ಸಂದರ್ಭಗಳಲ್ಲಿ ಜಾತಿ-ಧರ್ಮದ ಭೇದಭಾವದ ಬೀಜ ಬಿತ್ತುವ ಬಿಜೆಪಿ ನಿಲುವು ಖಂಡನೀಯ’ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಟೀಕಿಸಿದ್ದಾರೆ.</p><p>‘ದಸರಾ ಉತ್ಸವದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಹ್ವಾನಿಸಿರುವುದು ಹಾಗೂ ಅವರು ಅದನ್ನು ಒಪ್ಪಿಕೊಂಡಿರುವುದು ಅತ್ಯಂತ ಸ್ವಾಗತಾರ್ಹ. ಬಾನು ಮುಷ್ತಾಕ್ ಅವರು ಜಾಗತಿಕಮಟ್ಟದಲ್ಲಿ ಬುಕರ್ ಪ್ರಶಸ್ತಿ ಪಡೆದು ಕರ್ನಾಟಕದ ಗೌರವವನ್ನು ಜಗತ್ತಿನ ವೇದಿಕೆಯಲ್ಲಿ ಎತ್ತಿಹಿಡಿದಿದ್ದಾರೆ. ಆದರೆ, ಯಾವತ್ತೂ ಶಾಂತಿ-ಸೌಹಾರ್ದ ಬಯಸದ ಬಿಜೆಪಿ, ಅನಾವಶ್ಯಕ ಧಾರ್ಮಿಕ ವಿಷಯಗಳನ್ನು ಎಳೆದು ತಂದು ಒಂದು ಸಮುದಾಯಕ್ಕೆ ಅವಮಾನ ಮಾಡುತ್ತಿರುವುದು ತೀವ್ರ ಖಂಡನೀಯ. ಪ್ರತಿಯೊಬ್ಬರಿಗೂ ತಮ್ಮ ನಂಬಿಕೆ-ಆಚಾರಗಳನ್ನು ಪಾಲಿಸುವ ಹಕ್ಕು ಸಂವಿಧಾನದಲ್ಲೇ ಇದೆ. ಈ ಹಿಂದೆ ನಾಡಿನ ಖ್ಯಾತ ಕವಿ ಕೆ.ಎಸ್.ನಿಸಾರ್ಅಹ್ಮದ್ ಅವರು ದಸರಾ ಉತ್ಸವ ಉದ್ಘಾಟಿಸಿದ್ದು ಇವರಿಗೆ ನೆನಪಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.</p><p>‘ಬಿಜೆಪಿಯ ಇಂಥ ಹೇಳಿಕೆಗಳಿಂದ ಕನ್ನಡದ ಸಾಂಸ್ಕೃತಿಕ ಲೋಕಕ್ಕೆ ಅವಮಾನವಾಗುತ್ತದೆ. ನಾಡಿನಲ್ಲಿ ಮಳೆಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರು ಹಾಗೂ ಬಡ ಮಕ್ಕಳ ಶಿಕ್ಷಣ, ದಲಿತರ, ಕಾರ್ಮಿಕರು ಹಾಗೂ ಹಿಂದುಳಿದವರ ಸಮಸ್ಯೆಗಳ ಬಗ್ಗೆ ಮೌನವಾಗಿರುವ ಬಿಜೆಪಿ, ಜಾತಿ-ಧರ್ಮದ ರಾಜಕೀಯದ ಸುತ್ತ ಮಾತ್ರ ತಿರುಗಾಡುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಸಾರ್ವಜನಿಕರು ಇದನ್ನು ತಿರಸ್ಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>