<p><strong>ಮೈಸೂರು</strong>: ದಸರಾ ಕುಸ್ತಿ ಪಂದ್ಯಾವಳಿ ಸೆ.26ರಿಂದ ಅ.2ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭಾನುವಾರ ಕುಸ್ತಿಪಟುಗಳ ಜೋಡಿ ಕಟ್ಟುವ ಕಾರ್ಯ ನಡೆಯಿತು.</p>.<p>ಕಾಳಿಂಗರಾವ್ ಭವನದಲ್ಲಿ ಕುಸ್ತಿಪಟುಗಳಿಗೆ ಬೆನ್ನುತಟ್ಟುವ ಮೂಲಕ ಜೋಡಿ ಕಟ್ಟುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.</p>.<p>ನಗರವೂ ಸೇರಿದಂತೆ ನಾಡಿನ ವಿವಿಧ ಗರಡಿ ಮನೆಗಳಿಂದ 200ಕ್ಕೂ ಹೆಚ್ಚು ಪೈಲ್ವಾನರು ಪಂದ್ಯಾವಳಿಯಲ್ಲಿ ಭಾಗವಹಿಸಲು ಆಗಮಿಸಿದ್ದು, ಅರ್ಜಿ ಹಾಗೂ ಪೂರಕ ದಾಖಲೆಗಳನ್ನು ನೀಡಿದರು.</p>.<p>ನಂತರ ಚಿಣ್ಣರು, ಪೈಲ್ವಾನರು ಗದೆ ತಿರುಗಿಸುವ, ಕಲ್ಲು ಗುಂಡು ಎತ್ತುವ, ದಂಡ ಹೊಡೆಯುವ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗಿಯಾದರು. ಪುರುಷರು ಹಾಗೂ ಮಹಿಳೆಯರಿಗೆ ಸ್ಪರ್ಧೆಗಳು ನಡೆದವು.</p>.<p>ಕಾರ್ಯಕ್ರಮದಲ್ಲಿ ಗಣ್ಯರಿಗೆ ಪೇಟ ತೊಡಿಸಲಾಯಿತು.</p>.<p>ಸಂಸದ ಪ್ರತಾಪಸಿಂಹ, ಮೇಯರ್ ಶಿವಕುಮಾರ್, ಶಾಸಕ ಜಿ.ಟಿ.ದೇವೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಎಎಸ್ಪಿ ಬಿ.ಎನ್.ನಂದಿನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ದಸರಾ ಕುಸ್ತಿ ಪಂದ್ಯಾವಳಿ ಸೆ.26ರಿಂದ ಅ.2ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭಾನುವಾರ ಕುಸ್ತಿಪಟುಗಳ ಜೋಡಿ ಕಟ್ಟುವ ಕಾರ್ಯ ನಡೆಯಿತು.</p>.<p>ಕಾಳಿಂಗರಾವ್ ಭವನದಲ್ಲಿ ಕುಸ್ತಿಪಟುಗಳಿಗೆ ಬೆನ್ನುತಟ್ಟುವ ಮೂಲಕ ಜೋಡಿ ಕಟ್ಟುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.</p>.<p>ನಗರವೂ ಸೇರಿದಂತೆ ನಾಡಿನ ವಿವಿಧ ಗರಡಿ ಮನೆಗಳಿಂದ 200ಕ್ಕೂ ಹೆಚ್ಚು ಪೈಲ್ವಾನರು ಪಂದ್ಯಾವಳಿಯಲ್ಲಿ ಭಾಗವಹಿಸಲು ಆಗಮಿಸಿದ್ದು, ಅರ್ಜಿ ಹಾಗೂ ಪೂರಕ ದಾಖಲೆಗಳನ್ನು ನೀಡಿದರು.</p>.<p>ನಂತರ ಚಿಣ್ಣರು, ಪೈಲ್ವಾನರು ಗದೆ ತಿರುಗಿಸುವ, ಕಲ್ಲು ಗುಂಡು ಎತ್ತುವ, ದಂಡ ಹೊಡೆಯುವ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗಿಯಾದರು. ಪುರುಷರು ಹಾಗೂ ಮಹಿಳೆಯರಿಗೆ ಸ್ಪರ್ಧೆಗಳು ನಡೆದವು.</p>.<p>ಕಾರ್ಯಕ್ರಮದಲ್ಲಿ ಗಣ್ಯರಿಗೆ ಪೇಟ ತೊಡಿಸಲಾಯಿತು.</p>.<p>ಸಂಸದ ಪ್ರತಾಪಸಿಂಹ, ಮೇಯರ್ ಶಿವಕುಮಾರ್, ಶಾಸಕ ಜಿ.ಟಿ.ದೇವೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಎಎಸ್ಪಿ ಬಿ.ಎನ್.ನಂದಿನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>