<p>ಮೈಸೂರು: 2–3 ವರ್ಷದಿಂದ ಜೆಡಿಎಸ್ ಚಟುವಟಿಕೆಗಳಿಂದ ದೂರವೇ ಉಳಿದಿರುವ ಶಾಸಕ ಜಿ.ಟಿ. ದೇವೇಗೌಡ ಅವರು ಶುಕ್ರವಾರ ಬೆಂಗಳೂರಿನಲ್ಲಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರು ವುದು ಕುತೂಹಲ ಮೂಡಿಸಿದೆ.</p>.<p>ಮೇ 18ರಂದು ದೇವೇಗೌಡರ ಜನ್ಮದಿನವಿದ್ದು, ಅದಕ್ಕೂ ಮೂರು ದಿನ ಮುನ್ನವೇ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಟಿಡಿ, ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ನೀಡಿದರು.</p>.<p>ಜಿ.ಟಿ. ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ (ಮೇ 17) ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದ ಸಮಾರೋಪವಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ಪರ್ಯಾಯ ಅಭ್ಯರ್ಥಿ ಹುಡುಕುತ್ತಿರುವುದಾಗಿ ಪಕ್ಷದ ಮುಖಂಡರು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ನಡುವೆಯೇ ಜಿಟಿಡಿ, ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.</p>.<p>ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ‘ನನ್ನ ಪಕ್ಷ ನಿಷ್ಠೆ, ಪ್ರಾಮಾಣಿಕತೆ ಏನೆಂದು ಹಿರಿಯರಾದ ದೇವೇಗೌಡರಿಗೆ ಗೊತ್ತಿದೆ. ಪಕ್ಷದ ಸಂಘಟನೆಗೆ ನನ್ನನ್ನು ಆಹ್ವಾನಿಸಿಲ್ಲ. ಮುಂದೆ ಆಹ್ವಾನಿಸುವ ಸಂದರ್ಭ ಬಂದಾಗ ಆ ಬಗ್ಗೆ ನಿರ್ಧರಿಸುತ್ತೇನೆ’ ಎಂದರು. ‘ಭೇಟಿ ವೇಳೆ ನಾನಾಗಲಿ ಮತ್ತು ದೇವೇಗೌಡರಾಗಲಿ ಒಂದು ಅಕ್ಷರ ರಾಜಕೀಯ ಮಾತನಾಡಿಲ್ಲ’ ಎಂದರು.</p>.<p>‘ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ತನಕ ನನ್ನನ್ನು ಭಾಗವಹಿಸುವಂತೆ ಹೇಳಿಲ್ಲ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-39-211305037</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: 2–3 ವರ್ಷದಿಂದ ಜೆಡಿಎಸ್ ಚಟುವಟಿಕೆಗಳಿಂದ ದೂರವೇ ಉಳಿದಿರುವ ಶಾಸಕ ಜಿ.ಟಿ. ದೇವೇಗೌಡ ಅವರು ಶುಕ್ರವಾರ ಬೆಂಗಳೂರಿನಲ್ಲಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರು ವುದು ಕುತೂಹಲ ಮೂಡಿಸಿದೆ.</p>.<p>ಮೇ 18ರಂದು ದೇವೇಗೌಡರ ಜನ್ಮದಿನವಿದ್ದು, ಅದಕ್ಕೂ ಮೂರು ದಿನ ಮುನ್ನವೇ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಟಿಡಿ, ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ನೀಡಿದರು.</p>.<p>ಜಿ.ಟಿ. ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ (ಮೇ 17) ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದ ಸಮಾರೋಪವಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ಪರ್ಯಾಯ ಅಭ್ಯರ್ಥಿ ಹುಡುಕುತ್ತಿರುವುದಾಗಿ ಪಕ್ಷದ ಮುಖಂಡರು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ನಡುವೆಯೇ ಜಿಟಿಡಿ, ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.</p>.<p>ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ‘ನನ್ನ ಪಕ್ಷ ನಿಷ್ಠೆ, ಪ್ರಾಮಾಣಿಕತೆ ಏನೆಂದು ಹಿರಿಯರಾದ ದೇವೇಗೌಡರಿಗೆ ಗೊತ್ತಿದೆ. ಪಕ್ಷದ ಸಂಘಟನೆಗೆ ನನ್ನನ್ನು ಆಹ್ವಾನಿಸಿಲ್ಲ. ಮುಂದೆ ಆಹ್ವಾನಿಸುವ ಸಂದರ್ಭ ಬಂದಾಗ ಆ ಬಗ್ಗೆ ನಿರ್ಧರಿಸುತ್ತೇನೆ’ ಎಂದರು. ‘ಭೇಟಿ ವೇಳೆ ನಾನಾಗಲಿ ಮತ್ತು ದೇವೇಗೌಡರಾಗಲಿ ಒಂದು ಅಕ್ಷರ ರಾಜಕೀಯ ಮಾತನಾಡಿಲ್ಲ’ ಎಂದರು.</p>.<p>‘ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ತನಕ ನನ್ನನ್ನು ಭಾಗವಹಿಸುವಂತೆ ಹೇಳಿಲ್ಲ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-39-211305037</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>