<p><strong>ಮೈಸೂರು:</strong> ‘ತನ್ನ ವೈಯಕ್ತಿಕ ದೌರ್ಬಲ್ಯಗಳ ಕಾರಣಕ್ಕಾಗಿ ನೈತಿಕತೆ ಬದಿಗಿಟ್ಟು ಗಾಳಿ ಬಂದ ಕಡೆ ತೂರಿಕೊಳ್ಳುವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಬಗ್ಗೆ ಟೀಕಿಸುವುದು ಸರಿಯಲ್ಲ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.</p>.<p>‘ಕುಮಾರಸ್ವಾಮಿ ಎಂದೂ ಬಹುಮತದಿಂದ ಆಯ್ಕೆಯಾದ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿಲ್ಲ, ನಾನೊಬ್ಬ ಪರಿಸ್ಥಿತಿಯ ಶಿಶು ಎಂದು ಹಲವು ಬಾರಿ ಹೇಳಿಕೊಂಡಿದ್ದಾರೆ. ಇದರರ್ಥ ತಾನೊಬ್ಬ ಅವಕಾಶವಾದಿ; ಗಾಳಿ ಬಂದಾಗ ತೂರಿಕೊಳ್ಳುವ ಮನಸ್ಥಿತಿಯವನು ಎನ್ನುವುದೇ ಆಗಿದೆ. ಗಾಜಿನ ಮನೆಯಲ್ಲಿ ಕುಳಿತವರು ಇನ್ನೊಬ್ಬರ ಮೇಲೆ ಕಲ್ಲೆಸುವುದಕ್ಕೂ ಮೊದಲು ಆಲೋಚಿಸುವುದು ಒಳಿತು’ ಎಂದು ಪ್ರಕಟಣೆಯಲ್ಲಿ ಸಲಹೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-39-1382986933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ತನ್ನ ವೈಯಕ್ತಿಕ ದೌರ್ಬಲ್ಯಗಳ ಕಾರಣಕ್ಕಾಗಿ ನೈತಿಕತೆ ಬದಿಗಿಟ್ಟು ಗಾಳಿ ಬಂದ ಕಡೆ ತೂರಿಕೊಳ್ಳುವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಬಗ್ಗೆ ಟೀಕಿಸುವುದು ಸರಿಯಲ್ಲ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.</p>.<p>‘ಕುಮಾರಸ್ವಾಮಿ ಎಂದೂ ಬಹುಮತದಿಂದ ಆಯ್ಕೆಯಾದ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿಲ್ಲ, ನಾನೊಬ್ಬ ಪರಿಸ್ಥಿತಿಯ ಶಿಶು ಎಂದು ಹಲವು ಬಾರಿ ಹೇಳಿಕೊಂಡಿದ್ದಾರೆ. ಇದರರ್ಥ ತಾನೊಬ್ಬ ಅವಕಾಶವಾದಿ; ಗಾಳಿ ಬಂದಾಗ ತೂರಿಕೊಳ್ಳುವ ಮನಸ್ಥಿತಿಯವನು ಎನ್ನುವುದೇ ಆಗಿದೆ. ಗಾಜಿನ ಮನೆಯಲ್ಲಿ ಕುಳಿತವರು ಇನ್ನೊಬ್ಬರ ಮೇಲೆ ಕಲ್ಲೆಸುವುದಕ್ಕೂ ಮೊದಲು ಆಲೋಚಿಸುವುದು ಒಳಿತು’ ಎಂದು ಪ್ರಕಟಣೆಯಲ್ಲಿ ಸಲಹೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-39-1382986933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>